ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

Date:

Advertisements

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಬಿ ಮಂಜುನಾಥ್ ನಾಮನಿರ್ದೇಶನಗೊಂಡಿದ್ದರು. ಅವರನ್ನು ಡಿಸೆಂಬರ್ 20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯುತ್ತಿರುವ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯದರ್ಶಿಗಳನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕೆಆರ್‌ಎಸ್‌ನ ಎಂ ಬಿ ಕುಮಾರ್ ಅವರ ನಾಮನಿರ್ದೇಶನ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರಸ್ತಾವನೆ ಪರಿಶೀಲಿಸಿದ ಜಿಲ್ಲಾ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿದ್ದು, ಇನ್ನು ಮುಂದಿನ ಆದೇಶದವರೆಗೆ ತಾಲೂಕು ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸಲು ಎಂ ಬಿ ಕುಮಾ‌ರ್ ಅವರಿಗೆ ಸೂಚನೆ ನೀಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾದ ಕೃಷ್ಣೇಗೌಡ ಹುಸ್ಕೂರು, ವಿ ಶ್ರೀಹರ್ಷ, ಕಸಾಪ ಕೋಶಾಧ್ಯಕ್ಷ ಬಿ ಎಂ ಅಪ್ಪಾಜಪ್ಪ ಸೇರಿದಂತೆ ಶ್ರೀರಂಗಪಟ್ಟಣ ಕಸಾಪ ಪದಾಧಿಕಾರಿಗಳು ನೂತನ ಅಧ್ಯಕ್ಷ ಎಂ ಬಿ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X