ಮಂಡ್ಯ | ಕೆಆರ್‌ಎಸ್ ನೀರಿನ ಮಟ್ಟ‌ ಕುಸಿತ; 74 ಅಡಿಗೆ ಇಳಿದರೆ ಬೆಳೆಗೆ ನೀರಿಲ್ಲ

Date:

Advertisements

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿನ ನೀರಿನ ಮಟ್ಟ ಕಡಿಮೆಯಾಗಿರುವುದು ಬೆಂಗಳೂರು, ಮಂಡ್ಯ, ರಾಮನಗರ ಮತ್ತು ಮೈಸೂರು ಭಾಗದ ರೈತರಲ್ಲಿ ಆತಂಕ ಸೃಷ್ಟಿಸಿದೆ.

“ಅಣೆಕಟ್ಟಿನ ನೀರಿನ ಮಟ್ಟವು 74 ಅಡಿಗೆ ಬಂದಿಳಿದರೆ, ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರವೇ ಬಳಸಲಾಗುವುದು” ಎಂದು ಅಣೆಕಟ್ಟಿನ ಅಧಿಕಾರಿಗಳು ಮಾಹಿತಿ ನೀಡಿದರು.

“ಜೂನ್ ಒಳಗೆ ಅಣೆಕಟ್ಟೆಗೆ ಒಳಹರಿವು ಹೆಚ್ಚಾಗದಿದ್ದರೆ ಕಬ್ಬು ಬೆಳೆಗಾರರು ಸಮಸ್ಯೆ ಎದುರಿಸಬೇಕಾಗುತ್ತದೆ” ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

Advertisements
ಕೆಆರ್‌ಎಸ್‌ ಡ್ಯಾಮ್
ಕೆಆರ್‌ಎಸ್‌ ಡ್ಯಾಮ್‌ನ ನೀರಿನ ಮಟ್ಟ ಇಳಿಕೆ

“ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಗುರುವಾರ 85.84 ಅಡಿ ಇತ್ತು. ವಿಶ್ವೇಶ್ವರಯ್ಯ ನಾಲೆಯಲ್ಲಿ 1,252 ಕ್ಯೂಸೆಕ್ ನೀರು ಸೇರಿದಂತೆ ಒಳಹರಿವು 629 ಕ್ಯೂಸೆಕ್, ಹೊರಹರಿವು 2,336 ಕ್ಯೂಸೆಕ್ ಇತ್ತು. ನೀರಿನ ಮಟ್ಟ 74 ಅಡಿ ತಲುಪಿದರೆ ಮಾತ್ರ ಕುಡಿಯುವ ಉದ್ದೇಶಕ್ಕಾಗಿ ನೀರನ್ನು ಸಂರಕ್ಷಿಸಲಾಗುವುದು” ಎಂದು ಕೆಆರ್‌ಎಸ್ ಅಣೆಕಟ್ಟಿನ ಅಧೀಕ್ಷಕ ಆನಂದ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

“ಮಾರ್ಚ್ 1 ರಿಂದ ಮೇ 17ರ ನಡುವೆ ಕಾವೇರಿ ನದಿಯ ಮುಖ್ಯ ಜಲಾನಯನ ಪ್ರದೇಶವಾದ ಕೊಡಗಿನಲ್ಲಿ ಶೇ.45ರಷ್ಟು ಮಳೆ ಕೊರತೆಯಾಗಿದೆ. ಕಾವೇರಿಯ ಮುಖ್ಯ ಉಪನದಿ ಹೇಮಾವತಿ ಉಗಮ ಸ್ಥಾನ ಚಿಕ್ಕಮಗಳೂರಿನಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ” ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ (ಕೆಎಸ್ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ ತಿಳಿದುಬಂದಿದೆ.

“ನೀರಿನ ಮಟ್ಟ 74 ಅಡಿಗಿಂತ ಕಡಿಮೆಯಾದರೆ ಕೃಷಿಗೆ ನೀರು ಸಿಗುವುದಿಲ್ಲ ಎಂಬುದು ರೈತರಿಗೆ ತಿಳಿದಿದೆ. ಮುಂದಿನ ಕೆಲವು ದಿನಗಳಲ್ಲಿ ಕೊಯ್ಲು ಪ್ರಾರಂಭವಾಗುವ ಸಾಧ್ಯತೆ ಇರುವುದರಿಂದ ಭತ್ತಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಜೂನ್‌ನಲ್ಲಿ ನೀರು ಬಿಡದಿದ್ದರೆ ಕಬ್ಬಿನ ಬೆಳೆಗೆ ತೊಂದರೆಯಾಗುತ್ತದೆ. ಜೂನ್‌ನಲ್ಲಿ ಅಣೆಕಟ್ಟಿನ ನೀರು ನಿರ್ಣಾಯಕವಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಹೇಳಿದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X