ಮಂಡ್ಯ | ಜಮೀನು ವಿವಾದ; ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ಜಮೀನಿಗೆ ತೆರಳುವ ದಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಗುಂಪೊಂದು ಮೂವರು ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಶೀಳನೆರೆ ಹೋಬಳಿಯ ಬ್ಯಾಲದಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಗುಂಪು, ಮಹಿಳೆಯರ ಬಳಿಯಿದ್ದ ಚಿನ್ನದ ಸರ ಮತ್ತು ಓಲೆಯನ್ನು ಕಸಿದುಕೊಂಡು ಪರಾರಿಯಾಗಿದೆ.

ಘಟನೆಯಲ್ಲಿ ನಾಗಮ್ಮ, ಮಾಲಮ್ಮ, ಮಂಜಮ್ಮ ಎಂಬ ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಬ್ಯಾಲದಕೆರೆಯ ಸರ್ಕಾರಿ ಗೋಮಾಳದಲ್ಲಿ ತಿಮ್ಮಮ್ಮ ಎಂಬವರು ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ಅವರ ಮನೆಗೆ ತೆರಳಲು ರಸ್ತೆ ಇರಲಿಲ್ಲ. ಮನೆಗೆ ದಾರಿಯ ವಿಚಾರದಲ್ಲಿ ತಿಮ್ಮಮ್ಮ ಮತ್ತು ಕೇದಾಳೆಗೌಡ ಕುಟುಂಬಸ್ಥರ ನಡುವೆ ಜಗಳ ನಡೆದಿತ್ತು. ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಎರಡೂ ಕುಟುಂಬದವರಿಗೂ ಬುದ್ಧಿ ಹೇಳಿದ್ದರು.

ಆದರೆ, ಸೋಮವಾರ ಎರಡೂ ಕುಟುಂಬಗಳ ನಡುವೆ ಮತ್ತೆ ಜಗಳ ನಡೆದಿದೆ. ಈ ವೇಳೆ, ಆರೋಪಿಗಳು ಮೂವರು ಮಹಿಳೆಯರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆ ಸಂಬಂಧ ಹಲ್ಲೆಗೊಳಗಾದ ನಾಗಮ್ಮ ಅವರ ಪುತ್ರ ಮಂಜೇಗೌಡ ಕೆ.ಆರ್‌ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಹರೀಶ್, ಚಂದ್ರೇಗೌಡ, ಮಂಜೇಗೌಡ, ಮಮತಾ, ಶೈಲಜಾ, ಯಶವಂತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X