ಮಂಡ್ಯ | ನಿಯಮ ಪಾಲಿಸದೆ ಖಾಸಗಿ ವ್ಯಕ್ತಿಗೆ ಸರಕಾರಿ ಭೂಮಿ; ಮದ್ದೂರು ನಾಗರಿಕರಿಂದ ಪ್ರತಿಭಟನೆ

Date:

Advertisements

ಗ್ರಾಮದಲ್ಲಿರುವ ಸರಕಾರಿ ಜಾಗವನ್ನು ನಿಯಮಬಾಹಿರವಾಗಿ ಖಾತೆ ಮಾಡಿಕೊಟ್ಟಿರುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಮದ್ದೂರಿನ ನಾಗರಿಕರು ತಹಶೀಲ್ದಾರಿಗೆ ಹಾಗೂ ಪುರಸಭೆಯ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

ಮದ್ದೂರು ಪಟ್ಟಣದ ಹಳೆಯ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಸರ್ವೆ ನಂಬರ್ 864/5 ಮತ್ತು 6ನೇ ಜಮೀನಿನ ನಡುವೆ 5 ಗುಂಟೆ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿ ಎಮ್.ಟಿ.ಮಂಜುನಾಥ್ ಎಂಬುವರಿಗೆ, ಮದ್ದೂರು ಪುರಸಭೆ ಮುಖ್ಯಾಧಿಕಾರಿಗಳು ನಿಯಮ ಬಾಹಿರವಾಗಿ ಖಾತೆ ಮಾಡಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಗ್ರಾಮ ಠಾಣಾ ಜಾಗವನ್ನು ವ್ಯಕ್ತಿಯೊಬ್ಬರಿಗೆ ಮಂಜೂರು ಮಾಡಿ, ಇ-ಖಾತೆ ಮಾಡುವ ಮುನ್ನ ನಿಯಮಗಳನ್ನು ಪಾಲಿಸಿಲ್ಲ. ಪುರಸಭೆಯ ಸಾಮಾನ್ಯ ಸಭೆಯಲ್ಲಿ ಖಾತೆ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿಲ್ಲ. ಆಡಳಿತಾಧಿಕಾರಿ ಹಾಗು ಉಪವಿಭಾಗಾಧಿಕಾರಿಗಳ ಮುಂದೆ ಕಡತ ಮಂಡಿಸಿಲ್ಲ, ಸರ್ಕಾರದ ನಿಯಾಮಾವಳಿಗಳನ್ನು ಪಾಲಿಸದೆ ಇ-ಖಾತೆ ಮಾಡಬೇಕಾದ ಕ್ರಮವನ್ನು ಗಾಳಿಗೆ ತೂರಿ ಗ್ರಾಮಠಾಣಾ ಜಾಗದ ಮೂಲ ದಾಖಲಾತಿ ಮತ್ತು ಇದರ ಸ್ಥಳ ಐತಿಹ್ಯ ಗಮನಿಸದೆ ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ ಎಂದು ನಾಗರಿಕರು ದೂರಿದರು.

Advertisements
ಮಂಡ್ಯ ಮನವಿ

ಅಲಿನೇಷನ್ ನಕ್ಷೆಗೆ ಯೋಜನಾ ಪ್ರಾಧಿಕಾರದ ಒಪ್ಪಿಗೆ ಇಲ್ಲ. ಜಿಲ್ಲಾಧಿಕಾರಿಗಳಿಂದ ಅಲಿನೇಷನ್ ಆಗಿ ಬಂದಿಲ್ಲ. ಜಮೀನಿನ ಮೌಲ್ಯಕ್ಕೆ ಅನುಗುಣವಾಗಿ ಕಿಮ್ಮತ್ತು ಪಡೆಯದೆ ಖಾತೆ ಮಾಡಿರುತ್ತಾರೆ. ಆದ್ದರಿಂದ ಈ ಪ್ರಕರಣದಲ್ಲಿ ಭಾಗಿಯಾಗಿರುವ ಪುರಸಭಾ ಅಧಿಕಾರಿಗಳು, ಸಿಬ್ಬಂದಿಯನ್ನು ಈ ಕೂಡಲೆ ಅಮಾನರು ಮಾಡಬೇಕು. ಅಕ್ರಮವಾಗಿ, ನಿಯಮಬಾಹಿರವಾಗಿ ಖಾತೆ ಮಾಡಿರುವ ಈ ಆಸ್ತಿಯ ಖಾತೆಯನ್ನು ರದ್ದುಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸದರಿ ಆಸ್ತಿಯನ್ನು ಪುರಸಭಾ ವಶಕ್ಕೆ ಪಡೆದು ಈ ಜಾಗದ ಪಕ್ಕದಲ್ಲೆ ಪುರಾತನ ಹೊಂಬಾಳಮ್ಮನ ದೇವಾಲಯದ ಜಾಗವಿದ್ದು, ಮುಂದಿನ ದಿನಗಳಲ್ಲಿ ಮದ್ದೂರು ತಾಲ್ಲೂಕಿನ ಗ್ರಾಮಸ್ಥರು ಗುಡಿಯ ನಿರ್ಮಾಣ ಕಾರ್ಯ ಕೈಗೊಳ್ಳುತ್ತಿದ್ದು, ಗುಡಿಗೆ ಬರುವ ನಾಗರಿಕರ ಉಪಯೋಗಕ್ಕೆ ಈ ಆಸ್ತಿಯನ್ನು ಮೀಸಲಿಡುವಂತೆ ಮನವಿಯಲ್ಲಿ ತಿಳಿಸಿದರು.

ಮದ್ದೂರು 1 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X