ಮಂಡ್ಯ | ಡೆತ್‌ನೋಟ್ ಬರೆದು ಮನೆಬಿಟ್ಟಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ

Date:

Advertisements

“ಮನೆಯಲ್ಲಿ ತನ್ನ ಬಗ್ಗೆ ಅನುಮಾನಗಳು ಇದೆ. ಹಾಗಾಗಿ ನನಗೆ ಬದುಕಲು ಮನಸ್ಸಿಲ್ಲ. ನಾನು ಸಾಯಲು ಹೊರಟಿದ್ದೇನೆ” ಎಂದು ಪತ್ರ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಶಾಲಾ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಲಿಖಿತ ಪಿ ಗೌಡ(13) ಎಂಬ ವಿದ್ಯಾರ್ಥಿನಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಳು.

ವಿದ್ಯಾರ್ಥಿನಿ ಲಿಖಿತಾ ಬೆಂಗಳೂರಿನ ಕೇಂಗೇರಿ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಆಕೆ ಸುರಕ್ಷಿತವಾಗಿದ್ದಾಳೆ. ಮಂಡ್ಯಕ್ಕೆ ಕರೆತರಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

Advertisements

ಮಂಡ್ಯ ನಗರದ ಹೊಸಳ್ಳಿಯಿಂದ ಲಿಖಿತಾ ನಾಪತ್ತೆಯಾಗಿರುವ ಬಗ್ಗೆ ಮಂಡ್ಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಷಕರಾದ ಪ್ರಕಾಶ್ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಯ ಪತ್ತೆಗಾಗಿ ಮಂಡ್ಯ ಪೊಲೀಸರು ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು.

ಆಕೆಯ ವಿವರಗಳನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿತ್ತು.‌ ಪೊಲೀಸರು ಆಕೆಯ ಪತ್ತೆ ನಡೆಸುತ್ತಿರುವಾಗಲೇ ಕೆಂಗೇರಿ ರೈಲ್ವೆ ಸ್ಟೇಷನ್ ಸಮೀಪ ಆಟೋ ಚಾಲಕರೋರ್ವರಿಗೆ ಪತ್ತೆಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಾಲಕಿಯ ಫೋಟೊ ಹಾಗೂ ವಿಡಿಯೋ ಗಮನಿಸಿದ್ದ ರಿಕ್ಷಾ ಚಾಲಕ, ಬಾಲಕಿ ಪತ್ತೆಯಾಗಿರುವ ವಿಚಾರವನ್ನು ಕೆಂಗೇರಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪತ್ರದ ಮೂಲಕ ತನ್ನ ನೋವು ತಿಳಿಸಿದ್ದ ಬಾಲಕಿ

ತಾನು ಸಾಯುವುದಾಗಿ ಪತ್ರ ಬರೆದಿದ್ದ ಬಾಲಕಿ, ಪತ್ರದಲ್ಲಿ ತಾನು ಮನೆಯಲ್ಲಿ ಅನುಭವಿಸುತ್ತಿರುವ ನೋವನ್ನು ಬರೆದಿಟ್ಟಿದ್ದಾಳೆ.

“ನನ್ನ ಈ ನಿರ್ಧಾರಕ್ಕೆ ಅನುಮಾನ ಕಾರಣ. ನನ್ನ ನೋವು ಕೇಳುವವರು ಯಾರೂ ಇಲ್ಲ” ಎಂದು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿ ಬರೆದಿರುವ ಪತ್ರದ ಪ್ರತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, “ಮಂಡ್ಯದಲ್ಲಿ ಮನೆ ಬಿಟ್ಟು ಹೋಗಿ ದುಡುಕಿನ ನಿರ್ಧಾರ ಮಾಡಿದ್ದ ಈ ಪುಟಾಣಿ ಹೆಣ್ಣು ಮಗಳು ವಾಪಾಸ್ ಸಿಕ್ಕಿ ತಮ್ಮ ತಂದೆ ತಾಯಿಯ ಮಡಿಲು ಸೇರಿದ್ದಾಳೆ. ದಯವಿಟ್ಟು ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬೇಡಿ. ಮಕ್ಕಳ ಬೇಕು- ಬೇಡಗಳಿಗೂ ಪ್ರೀತಿಯಿಂದ ಸ್ಪಂದಿಸಿ. ಬಹಳ ಕಷ್ಟಪಟ್ಟು ಬೆಳೆಸಿರುತ್ತೀರಿ. ಎಳೆಯ ವಯಸ್ಸಿನ ಮಕ್ಕಳು ದುಡುಕಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ, ಪೋಷಕರು ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಹಲವಾರು ಮಂದಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

7 COMMENTS

  1. ಸಂತೋಷ.
    ಇನ್ನು ಬಾಲಕಿಯ ಹೆಸರು, ವಿವರ, ಚಿತ್ರ ಪ್ರಕಟಿಸುವುದನ್ನು ನಿಲ್ಲಿಸಬೇಜಕು. ಬಾಲಕಿಗೆ ಮತ್ತು ಕುಟುಂಬಕ್ಕೆ ಸಾಂತ್ವನ, ಆಪ್ತಸಮಾಲೋಚನೆಗೆ ವ್ಯವಸ್ಥೆ ಮಾಡಬೇಕು.

  2. ಸ್ವಲ್ಪವೂ ಸಾಮಾನ್ಯ ಜ್ಞಾನವಿಲ್ಲವೇ? ಮೊದಲೇ ನೊಂದ ಜೀವಕ್ಕೆ ಈ ರೀತಿ ಹೆಸರು ಫೋಟೋ ಮೀಡಿಯಾಗಳಲ್ಲಿ ಹರಿದಾಡಿದರೆ ಏನಾಗಬಹುದು? ಇನ್ನಷ್ಟು ಅವಮಾನದಿಂದ ನಿಜವಾಗಿಯೇ ಅತ್ಮಹತ್ಯೆ ಮಾಡಿಕೊಳ್ಳಬಹುದು!
    ದಯವಿಟ್ಟು ಕೂಡಲೇ ಈ ಪೋಸ್ಟನ್ನು ತೆಗೆದು ಹಾಕಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X