ಮಂಡ್ಯ | ಸಾಮಾನ್ಯ ಜನರ ಜತೆ ಕುಳಿತು ಮೆಸ್‌ನಲ್ಲಿ ಊಟ ಮಾಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ; ಸಾರ್ವಜನಿಕರಿಂದ ಮೆಚ್ಚುಗೆ

Date:

Advertisements

ಶಾಸಕರಾದವರು ಐಷರಾಮಿ ಹೋಟೆಲ್‌ಗಳಲ್ಲಿ ಊಟ ಮಾಡುವುದು ಸರ್ವೆ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಮಾನ್ಯ ಮೆಸ್ ಒಂದರಲ್ಲಿ ಸಾಮಾನ್ಯ ಜನರ ಜತೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಗಮನಸೆಳೆದರು.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಶಾಸಕರ ಕಚೇರಿಗೆ ಭೇಟಿ ನೀಡಿ ರೈತಸಂಘದ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿದ ಬಳಿಕ ಪ್ರಕಾಶ್ ಮೆಸ್‌ನಲ್ಲಿ ಸಾಮಾನ್ಯ ಜನರಂತೆಯೇ ಮಧ್ಯಾಹ್ನದ ಊಟ ಮಾಡಿದರು.

ತಾವೊಬ್ಬ ಶಾಸಕನೆಂಬ ಹಮ್ಮುಬಿಮ್ಮು ಬಿಟ್ಟು ಸಾಮಾನ್ಯ ಜನರ ಜತೆಯಲ್ಲಿಯೇ ಕುಳಿತು ಊಟ ಮಾಡುವ ಮೂಲಕ ಗಮನಸೆಳೆದರು. ಈ ವೇಳೆ ಶಾಸಕರನ್ನು ಕಂಡ ಜನರು ಶಾಸಕ ದರ್ಶನ್ ಪುಟ್ಟಣ್ಣಯ್ಯ ಊಟ ಮಾಡುತ್ತಿದ್ದ ಸ್ಥಳಕ್ಕೆ ಬಂದು ಮಾತನಾಡಿಸುತ್ತಿದ್ದ ದೃಶ್ಯ ಕಂಡುಬಂದಿತು.

Advertisements

ಈ ಹಿಂದೆ ಅವರ ತಂದೆ ದಿ‌. ಕೆ ಎಸ್ ಪುಟ್ಟಣ್ಣಯ್ಯ ಕೂಡ ಮೆಸ್ ಹಾಗೂ ಶೆಡ್ ಹೋಟೆಲ್‌ಗಳಲ್ಲಿ ಊಟ ಮಾಡುತ್ತಿದ್ದುದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

ಅಂತೆಯೇ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ತಮ್ಮ ತಂದೆ ಕೆ ಎಸ್ ಪುಟ್ಟಣ್ಣಯ್ಯ ರೀತಿಯಲ್ಲಿಯೇ ಮೆಸ್ ಹಾಗೂ ಶೆಡ್ ಹೋಟೆಲ್‌ಗಳಲ್ಲಿ ಊಟ ಮಾಡುವ ಮೂಲಕ ತಂದೆ‌ಯವರು ನಡೆದ ಮಾದರಿಯಲ್ಲಿ ನಡೆಯತೊಡಗಿದ್ದಾರೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಜತೆ ರೈತಸಂಘದ ಮುಖಂಡ ಕನಗನಮರಡಿ ಬಲರಾಮು ಸೇರಿದಂತೆ ಇತರರು ಇದ್ದರು.

ವರದಿ : ರಂಗನಾಥ್, ಮಾಕವಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X