ಮಂಡ್ಯ | ಅಮಾಯಕರ ಹೆಸರಿನಲ್ಲಿ ₹1 ಕೋಟಿಗೂ ಹೆಚ್ಚು ಸಾಲ ಪಡೆದು ತಾಯಿ-ಮಗಳು ವಂಚನೆ; ಪರಾರಿ

Date:

Advertisements

ಮೈಕ್ರೋ ಫೈನಾನ್ಸ್‌ಗಳ ಮೂಲಕ ಅಮಾಯಕ ಮಹಿಳೆಯರ ಹೆಸರಿನಲ್ಲಿ ₹1 ಕೋಟಿ ರೂ.ಗಳಿಗೂ ಹೆಚ್ಚು ಸಾಲ ಪಡೆದು, ತಾಯಿ-ಮಗಳಿಬ್ಬರು ಹಲವು ಕುಟುಂಬಗಳನ್ನು ವಂಚಿಸಿರುವ ಘಟನೆ ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಮಂಡ್ಯ ನಗರದ ಗಾಂಧಿನಗರ 5ನೇ ತಿರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯಮ್ಮ ಹಾಗೂ ಆಕೆಯ ಮಗಳು ದಿವ್ಯ ಹಲವು ಅಮಾಯಕರ ಹೆಸರಿನಲ್ಲಿ ಕೋಟಿ ರೂ. ಗೂ ಹೆಚ್ಚು ಸಾಲ ಪಡೆದು ವಂಚನೆ ಮಾಡಿ, ಈಗ ಪರಾರಿಯಾಗಿದ್ದಾರೆ.

ಈಗ ತಮ್ಮ ಹೆಸರಿನಲ್ಲಿ ಸಾಲ ತೆಗೆದುಕೊಟ್ಟಿರುವ ಮಹಿಳೆಯರು, ಸಾಲದ ಕಂತುಗಳನ್ನು ಕಟ್ಟಿ ತೀರಿಸುವ ಅನಿವಾರ್ಯತೆ ಎದುರಾಗಿದ್ದು, ಈ ಇಬ್ಬರು ಮಹಿಳೆಯರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

Advertisements

ಹೊಸಹಳ್ಳಿ ವೃತ್ತದಲ್ಲಿ ವಂಚಕ ತಾಯಿ, ಮಗಳ ಭಾವಚಿತ್ರವಿರುವ ಫ್ಲೆಕ್ಸ್‌ ಅನ್ನು ಅಳವಡಿಸಿರುವ ಸಂತ್ರಸ್ತರು, ನಾವು ಸಾಲದ ಕಂತುಗಳನ್ನು ಕಟ್ಟುವುದಿಲ್ಲ, ಈ ವಂಚನೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯ ಪ್ರತಿನಿಧಿಗಳು ಕೂಡ ಭಾಗಿಯಾಗಿದ್ದಾರೆ. ಅವರೆಲ್ಲರೂ ಸೇರಿ ನಮ್ಮನ್ನು ವಂಚಿಸಿದ್ದಾರೆ. ಹಾಗಾಗಿ ಈ ಇಬ್ಬರು ವಂಚಕಿಯರನ್ನು ಹಿಡಿದು ತರುವವರೆಗೂ ಸಾಲದ ಕಂತುಗಳನ್ನು ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X