ಮಂಡ್ಯ | ಆಟೋ ಚಾಲಕನ ಮೇಲೆ ಪೊಲೀಸ್ ಪೇದೆ ದರ್ಪ

Date:

ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬನ ಮೇಲೆ ಪೊಲೀಸ್‌ ಕಾನ್ಸ್‌ಟೇಬಲ್‌ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಮಂಗಳವಾರ ನಡೆದಿದೆ. ಹಲ್ಲೆ ಮಾಡಿದ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಂಡ್ಯ ಜಿಲ್ಲಾಸ್ಪತ್ರೆಯ ಎದುರು ಆಟೋ ಚಾಲಕ ಮತ್ತು ಪೊಲೀಸರು ತೆರಳುತ್ತಿದ್ದ ಬೈಕ್‌ ನಡುವೆ ಅಪಘಾತವಾಗಿದೆ. ಪೊಲೀಸ್‌ ಪೇದೆ ರಸ್ತೆಗೆ ಬಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ.

ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಟೋ ಚಾಲಕನಿಗೆ ಹೇಳಿದ್ದಾರೆ. ಅದರಂತೆ ಚಾಲಕ ಪೇದೆಯನ್ನು ಆಸ್ಪತ್ರೆಗೆ ಹೋಗೋಣ ಬನ್ನಿ ಎಂದು ಕರೆದಿದ್ದಾರೆ. ಆತ ಕರೆದಾಗ ಸಿಟ್ಟಿಗೆದ್ದ ಪೇದೆ, ಚಾಲಕನ ಕಪಾಳಕ್ಕೆ ಹೊಡೆದು, ಹೊಟ್ಟೆಗೆ ಮುಷ್ಠಿ ಹಿಡಿದು ಗುದ್ದಿದ್ದಾರೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾತ್ರವಲ್ಲದೆ, ಪೊಲೀಸ್‌ ಠಾಣೆಗೆ ಬರುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಚಾಲಕ ಆಟೋ ಹತ್ತಿದ ಬಳಿಕ, ಮತ್ತೆ ಹಲ್ಲೆ ಮಾಡಿದ್ದಾರೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಚಾಲಕ ಮತ್ತು ಆಟೋವನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ವಿಡಿಯೋ ಮಾಡಿದವರು ಮಾಹಿತಿ ನೀಡಿದ್ದಾರೆ.

ವಿಡಿಯೋ ಟ್ವಿಟರ್‌ನಲ್ಲಿ ವೈರಲ್‌ ಅಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. “ಈ ದುರಂಕಾರಕ್ಕೆ ತಕ್ಕ ದಂಡ ಹಾಕ್ಲೆಬೇಕು ಅವರಿಗೆ, ಪೊಲೀಸ್ ಅಂದ್ರೇನು ಸರ್ವಧಿಕಾರಿಗಳ್ಳ, ಹೊಡೆಯೋ ಹಕ್ಕು ಯಾರು ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್‌ ಮಾಡಿರುವ ನೆಟ್ಟಿಗರು, “ಪೇದೆಯ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವ ಅಧಿಕಾರ ಪೊಲೀಸರಿಗಿಲ್ಲ. ಆತನನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...