ಮಂಡ್ಯ | ದಲಿತ ವಿರೋಧಿ ಹೇಳಿಕೆ ನೀಡಿರುವ ಜಿ ಟಿ ದೇವೆಗೌಡ ವಿರುದ್ಧ ಪ್ರತಿಭಟನೆ

Date:

Advertisements

ಪ್ರಸ್ತುತ ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಮಸೂದೆ ಮಂಡನೆ ಸಂದರ್ಭದಲ್ಲಿ ರಾಜ್ಯದ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜೆಡಿಎಸ್ ಶಾಸಕ ಜಿ ಟಿ ದೇವೆಗೌಡ ವಿರುದ್ಧ ಕರ್ನಾಟಕ ಸಂವಿಧಾನ ಸೇನೆ ನೇತೃತ್ವದೊಂದಿಗೆ ಮಂಡ್ಯ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

“ಸಹಕಾರಿ ಕ್ಷೇತ್ರದಲ್ಲಿ ದಲಿತರು, ಮಹಿಳೆಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಜಾರಿಗೆ ತರಲು ಉದ್ದೇಶಿಸಿದ್ದ ಮಸೂದೆ ಕುರಿತು ವಿರೋಧ ವ್ಯಕ್ತಪಡಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೆಗೌಡ, ʼಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಮುಳುಗಿಸಿಬಿಡಿ, ಸರ್ವನಾಶ ಮಾಡಿಬಿಡಿʼ ಎಂದು ಹೇಳಿಕೆ ನೀಡಿರುವುದು ಅವರ ದಲಿತ ವಿರೋಧಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಇದರಿಂದ ರಾಜ್ಯದ ಬಹು ಸಂಖ್ಯಾತರಾದ ದಲಿತ ವರ್ಗಕ್ಕೆ ಅಪಾರ ಮಾನಹಾನಿಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆ ಪ್ರಕರಣ ದಾಖಲಿಸಿಕೊಳ್ಳಬೇಕು” ಎಂದು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Advertisements

“ದಲಿತರಿಗೆ ಪ್ರಾತಿನಿಧ್ಯ ನೀಡಿದರೆ ಸಹಕಾರ ಕ್ಷೇತ್ರ ಸರ್ವನಾಶವಾಗುವುದೆ? ದಲಿತರ ಬಗ್ಗೆ ಈ ರೀತಿಯ ಕೀಳು ಮನೋಭಾವನೆಯನ್ನು ಹೊಂದಿರುವ ಮೂಲಕ ದಲಿತರನ್ನು ಅವಮಾನ ಮಾಡಿರುವ ಜಿ ಟಿ ದೇವೆಗೌಡರನ್ನು ಜೆಡಿಎಸ್ ಪಕ್ಷದ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಗಂಗರಾಜು, ನರಸಿಂಹಮೂರ್ತಿ ಎಂ ವಿ ಕೃಷ್ಣ, ಜೆ ರಾಮಯ್ಯ, ತುಳಸೀಧರ್‌, ನಾರಾಯಣಸ್ವಾಮಿ, ಎಲೆಚಾಕನಹಳ್ಳಿ ಸ್ವಾಮಿ, ನರಸಿಂಹರಾಜು ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರಸ್ತೆ ಗುಂಡಿಗಳನ್ನು ಮುಚ್ಚಿದ ದಲಿತ ಮುಖಂಡರು

ವಿಜಯಪುರ ನಗರದ ಸುತ್ತಮುತ್ತಲಿನಲ್ಲಿರುವ ರಸ್ತೆಗಳು ಹದಗೆಟ್ಟು ಹೋಗಿದ್ದು, ರಸ್ತೆಗಳ ಮಧ್ಯೆ ತಗ್ಗು...

ಹಾವೇರಿ | ಅತಿಥಿ ಉಪನ್ಯಾಸಕರ ಕೊರತೆ: ತಿಂಗಳಾದರೂ ಆರಂಭವಾಗದ ತರಗತಿಗಳು 

"ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ...

ಚಿಕ್ಕಬಳ್ಳಾಪುರ | ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್‌ಮೆಂಟ್‌ ಟ್ರಸ್ಟ್‌ನ ವಾರ್ಷಿಕೋತ್ಸವ ಅಂಗವಾಗಿ ರಕ್ತದಾನ ಶಿಬಿರ

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 22ರ ಶುಕ್ರವಾರದಂದು ಅಮ್ಮ ಎಜುಕೇಷನಲ್...

ತುಮಕೂರು | ಅಲೆಮಾರಿಗಳನ್ನು ಬೀದಿ ಪಾಲು ಮಾಡಿದ ಕಾಂಗ್ರೆಸ್ ಸರ್ಕಾರ : ಎ. ನರಸಿಂಹಮೂರ್ತಿ

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಶೇ....

Download Eedina App Android / iOS

X