ಮಂಡ್ಯ | ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡುವಂತೆ ಆಗ್ರಹಿಸಿ ರೈತ ಮುಖಂಡರಿಂದ ಮನವಿ

Date:

Advertisements

ಮಂಡ್ಯ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭ ಮಾಡಿ, ಕಬ್ಬು ಅರೆಯುವ ಕೆಲಸ ಪ್ರಾರಂಭ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ತಮ್ಮ ಮನವಿಯಲ್ಲಿ, “ಈಗಾಗಲೇ ಬರದಿಂದ ತತ್ತರಿಸಿರುವ ರೈತರು ಅಲ್ಪಸ್ವಲ್ಪ ಉಳಿಸಿ ಬೆಳೆಸಿಕೊಂಡ ಕಬ್ಬು ಸತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕಳೆದ ಹಂಗಾಮಿನಲ್ಲಿ ಕಾರ್ಖಾನೆಗಳು ಜನವರಿ ತಿಂಗಳಲ್ಲಿ ಕಬ್ಬು ಅರೆಯುವ ಕೆಲಸ ಸ್ಥಗಿತಗೊಳಿಸಿದ್ದವು. ನಾಲಾ ಅಚ್ಚುಕಟ್ಟು ಪ್ರದೇಶದ ಕಬ್ಬು, ನಿರೀಕ್ಷೆಗೆ ಮೀರಿ ಒಣಗಿದ ಪರಿಣಾಮ ಇಳುವರಿ ಕುಂಠಿತವಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಕೊಳವೆ ಬಾವಿಗಳು ಬತ್ತಿದ್ದು, ಕೆರೆಗಳು ಒಣಗಿ ಹೋಗಿರುವುದರಿಂದ ಕಬ್ಬು ಬೆಳೆಗಾರರ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹೀಗಿರುವಾಗ ಇನ್ನೂ ತಡಮಾಡಿ ಕಾರ್ಖಾನೆ ಪ್ರಾರಂಭಿಸಿದರೆ ಗಾಯದ ಮೇಲೆ ಬರೆ ಹಾಕಿದಂತೆ ಆಗುತ್ತದೆ. ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ನಾಲೆ ನೀರು ಬಿಡಲು ಸಿದ್ದತೆ ಆಗಿದೆ. ಕಾರ್ಖಾನೆಗಳಿಗೆ ನೀರು ಸೌಲಭ್ಯ ದೊರೆಯುತ್ತದೆ ಮತ್ತು ಇಳುವರಿ ಇಲ್ಲದ ಕಬ್ಬು ಕಟಾವು ಮಾಡಿ ಮುಂಗಾರು ಸಿದ್ದತೆ ಮಾಡಿಕೊಳ್ಳುವ ರೈತರಿಗೆ ಅನುಕೂಲ ಆಗುವಂತೆ ಎಲ್ಲ ಅಂಶಗಳನ್ನು ಗಮನಿಸಿಕೊಂಡು ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭ ಮಾಡಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು” ಎಂದು ರೈತ ಸಂಘ ಮನವಿಯಲ್ಲಿ ಆಗ್ರಹಿಸಿದೆ.

Advertisements

ಜಿಲ್ಲಾಧಿಕಾರಿ ಪರವಾಗಿ ರೈತರ ಮನವಿಯನ್ನು ಅಪಾರ ಜಿಲ್ಲಾಧಿಕಾರಿ ಡಾ.ಹೆಚ್ ಹೆಲ್ ನಾಗರಾಜು ಅವರು ಸ್ವೀಕರಿಸಿದರು.

ರಸಗೊಬ್ಬರಗಳನ್ನು ಪೂರೈಸುವಂತೆ ಮನವಿ

ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಿದ್ದತೆ ಈಗಾಗಲೇ ಪ್ರಾರಂಭವಾಗಿದ್ದು, ನಾಲೆಗಳಲ್ಲಿ ನೀರಿನ ನಿರೀಕ್ಷೆ ಇದೆ. ಹೀಗಾಗಿ ರೈತರು ಆಶಾದಾಯಕವಾಗಿದ್ದಾರೆ. ಆದ್ದರಿಂದ ಕೃಷಿಪರಿಕರಗಳು ರೈತರಿಗೆ ಸಿಗುವಂತೆ ಮತ್ತು ಈ ಬಾರಿ ಉಚಿತ ಬಿತ್ತನೆ ಬೀಜಗಳನ್ನು ಕೊಡುವಂತೆ ಮತ್ತು ರಸಗೊಬ್ಬರಗಳನ್ನು ಪೂರೈಸುವಂತೆ ಗುಣಮಟ್ಟದ ಔಷಧಿಗಳನ್ನು ಕೊಡುವಂತೆ ಮಂಡ್ಯ ಜಿಲ್ಲೆಯ ಕೃಷಿ ಜಂಟಿ ನಿರ್ದೇಶಕರಾದ ಅಶೋಕ್ ಅವರಿಗೆ ರೈತ ಮುಖಂಡರು ಮನವಿ ಸಲ್ಲಿಸಿದರು.

ರೈತ ಸಂಘ 1 1

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X