ಮಂಡ್ಯ | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ; ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

ಗ್ರಾಮದಲ್ಲಿ 2023ರ ಜೂನ್ ತಿಂಗಳಿನಲ್ಲಿ ಸಂಗೊಳ್ಳಿ ರಾಯಣ್ಣ ಯುವ ಬ್ರಿಗೇಡ್‌ ಸದಸ್ಯರು ಮತ್ತು ಗ್ರಾಮಸ್ಥರು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಿರ್ಮಿಸಿದ್ದರು. ಆ ಪ್ರತಿಮೆಯನ್ನು ಕೆಲ ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಪ್ರತಿಮೆಯ ಕತ್ತಿ, ಕೈ, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ಭಗ್ನಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಘಟನೆಯ ಬಗ್ಗೆ ತಿಳಿಸಿರುವ ಗ್ರಾಮದ ಮುಖಂಡ ಹಿರೇಗೌಡ, “ಸರ್ವ ಸಮುದಾಯ ನಾಯಕ ಮತ್ತು ಸ್ವತಂತ್ರಕ್ಕಾಗಿ ಹೋರಾಡಿದ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಮೆಯನ್ನು ಪ್ರತಿಷ್ಟಾಪನೆ ಮಾಡಲಾಗಿತ್ತು. ಆದ್ರೆ ಕಳೆದ ರಾತ್ರಿ ಕಿಡಿಗೇಡಿಗಳು ಪ್ರತಿಮೆಯನ್ನು ವಿರೋಪಗೊಳಿಸಿ, ವಿಕೃತಿ ಮೆರೆದಿದ್ದಾರೆ. ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವುದು ಖಂಡನೀಯ. ದುಷ್ಕರ್ಮಿಗಳನ್ನ ತಕ್ಷಣವೇ ಬಂಧಿಸಬೇಕು. ಕಾನೂನು ರೀತ್ಯಾ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಯಣ್ಣ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರ ತತ್ವ, ಆದರ್ಶ, ಹೋರಾಟದ ಹಾದಿ ಎಲ್ಲರಿಗೂ ಸಲ್ಲುವಂತದ್ದು. ಇಂತಹ ಮಹನೀಯರಿಗೆ ಅಪಮಾನ ಮಾಡುವುದು ಸೂಕ್ತವಲ್ಲ. ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಕಾರವಾರ | ಕಡವಾಡದಲ್ಲಿ ನಿರಂತರ ವಿದ್ಯುತ್ ಕಡಿತ – ಹೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...