ಮಂಡ್ಯ | ಪಾರಂಪರಿಕ ಕೃಷಿ ಉಳಿಸಿ: ಕುಲಾಂತರಿ ಆಹಾರದ ಎದುರು ಹೋರಾಟಕ್ಕೆ ಡಾ ಮಂಜುನಾಥ್ ಕರೆ

Date:

ಕುಲಾಂತರಿ ಆಹಾರದ ಎದುರಿನ ಹೋರಾಟಕ್ಕೆ ಬೆಂಬಲ ನೀಡೋಣ, ನಮ್ಮ ಪಾರಂಪರಿಕ ಕೃಷಿ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳೋಣ ಎಂದು ಡಾ. ಮಂಜುನಾಥ್ ಹೇಳಿದರು.

- Advertisement -

ಅವರು ಮಂಡ್ಯದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಭಾರತವು ಪಾರಂಪರಿಕ ಕೃಷಿ ಜ್ಞಾನ, ಸಂಸ್ಕೃತಿ, ಮತ್ತು ಪರಿಸರ ಹಿರಿಮೆಯುಳ್ಳ ದೇಶ. ನಮ್ಮ ಈ ವಿಶಿಷ್ಟ ಪರಂಪರೆಗೆ, ಬಹುರಾಷ್ಟ್ರೀಯ ಕಂಪನಿಗಳು ‘ಕುಲಾಂತರಿ ಆಹಾರ’ಗಳನ್ನು ತಂದು, ನಮ್ಮ ಕೃಷಿ, ಸಮಾಜ, ಮತ್ತು ಪರಿಸರಕ್ಕೆ ಮಾರಕವಾಗುವ ಕೆಲಸ ನಡೆಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಮ್ಮ ಜೈವಿಕ ವ್ಯವಸ್ಥೆಯಲ್ಲಿಯ ಉಲ್ಲಂಘನೆ ಜೊತೆಗೆ, ಇದು ನಮ್ಮ ಒಕ್ಕೂಟದ ರೈತರ, ಸಮಾಜದ, ಹಾಗೂ ಪಂಚಾಯಿತಿಗಳ ಹಕ್ಕುಗಳ ಉಲ್ಲಂಘನೆ ಕೂಡ ಆಗಿದೆ. ಕುಲಾಂತರಿ ಆಹಾರವು ನಮ್ಮ ಸ್ವದೇಶಿ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ಭಾರತದಲ್ಲಿ ವಸಾಹತು ಸ್ಥಾಪನೆ ಮಾಡಲು ಅವಕಾಶ ಕಲ್ಪಿಸುತ್ತಿದೆ. ಈ ಬೆಳವಣಿಗೆ, ಈಸ್ಟ್ ಇಂಡಿಯಾ ಕಂಪನಿಯ ಭಾರತಕ್ಕೆ ಬಂದು ನಮ್ಮ ದೇಶವನ್ನು ಶೋಷಿಸಿದ ಅತಿದೊಡ್ಡ ಘಟನೆಗಳ ತಾಜಾ ಪುನಾರಾವರ್ತಯಾಗಲಿದೆ ಎಂದರು.

WhatsApp Image 2024 09 16 at 6.54.40 PM

ಮಳವಳ್ಳಿ ಮಹೇಶ್ ಕುಮಾರ್ ಮಾತನಾಡಿ, ಒಕ್ಕೂಟ ಸರ್ಕಾರದ ಈ ಕೃತ್ಯವನ್ನು ತಡೆಯುವ ಅಗತ್ಯವಿದೆ. ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಕುಲಾಂತರಿ ತಳಿ ಬೀಜಗಳು, ಆಹಾರೋತ್ಪಾದನೆಗಳು, ಕಳೆ ನಾಶಕಗಳು, ಮತ್ತು ವಿಷ ಮಿಶ್ರಿತ ಉತ್ಪನ್ನಗಳ ಮೂಲಕ ನಮ್ಮ ಗ್ರಾಮಾಂತರ ಪ್ರದೇಶಗಳನ್ನು, ಸಾಂಪ್ರದಾಯಿಕ ಕೃಷಿ ಪದ್ಧತಿ ಹಾಗು ಆಹಾರ ರೂಢಿಯನ್ನು ಹಾಳುಗೆಡವಲು ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಕೆರೆ ಶಂಕರಯ್ಯ ಮಾತನಾಡಿ, ನಾವು ಭಾರತದ ಎಲ್ಲಾ ಜನರನ್ನು ಆಹ್ವಾನಿಸುತ್ತೇವೆ‌. ನಾವೆಲ್ಲರೂ ಒಟ್ಟುಗೂಡಿ ಕುಲಾಂತರಿ ಆಹಾರಗಳ ಎದುರು ಹೋರಾಟ ಮಾಡೋಣ. ಕೃಷಿ ಕ್ಷೇತ್ರದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಪ್ರವೇಶವನ್ನು ಸಂಪೂರ್ಣವಾಗಿ ತಡೆಗಟ್ಟೋಣ. ಈ ಹೋರಾಟವನ್ನು ಬಲಪಡಿಸಲು, 2024 ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2 ರವರೆಗೆ ತುಮಕೂರು ಜಿಲ್ಲೆಯ ದೊಡ್ಡಹೊಸೂರು ಗ್ರಾಮದಲ್ಲಿ ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ‘ದೊಡ್ಡಹೊಸೂರು ಸತ್ಯಾಗ್ರಹ’ ನಡೆಯಲಿದೆ. ಎಲ್ಲರೂ ಬನ್ನಿ ಎಂದು ಆಹ್ವಾನಿಸಿದರು.

ನಮ್ಮ ದನ, ಎಮ್ಮೆ, ಆಡು, ಕುರಿ, ಕೋಳಿ, ಮತ್ತು ನಮ್ಮ ಅಕ್ಕಿ, ಗೋಧಿ, ಕಾಳುಗಳ ಅಸ್ಥಿತ್ವ ಕಳೆದುಕೊಳ್ಳುವ ಹಂತಕ್ಕೆ ತಳ್ಳುತ್ತಿದ್ದಾರೆ. ಈ ಮಾರಣಾಂತಿಕ ಪ್ರಕ್ರಿಯೆಯು ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಮತ್ತು ಬದುಕು ಹಳ್ಳ ಹಿಡಿಸಲಿವೆ. ಈ ಹೋರಾಟದಲ್ಲಿ ಭಾಗವಹಿಸಲು ರೈತ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳು, ಪ್ರಗತಿಪರ ಸಂಘಟನೆಗಳು, ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ: ತನಿಖೆಯನ್ನು ಖುದ್ದು ಪರಿಶೀಲಿಸಲು ಎಸ್‌ಪಿಗೆ ಸೂಚಿಸಿದ ಸಿಎಂ

ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆಂಪೂಗೌಡ ಮಾತನಾಡಿ, ಕುಲಾಂತರಿ ಕಾಯ್ದೆಯನ್ನು ತಿರಸ್ಕರಿಸಿ, ಪಂಚಾಯತ್ ಮೂಲಕ ಸಹಜ ಬೇಸಾಯವನ್ನು ಸ್ಥಾಪಿಸಬೇಕು. ಕರ್ನಾಟಕ ಸರ್ಕಾರವು ರಾಜ್ಯವನ್ನು ‘ಕುಲಾಂತರಿ ಮುಕ್ತ’ ಎಂದು ಘೋಷಿಸಬೇಕು. ಬೆಯರ್ ಐಸಿಎಆರ್ ಒಪ್ಪಂದವನ್ನು ರದ್ದುಗೊಳಿಸಬೇಕು. ಒಕ್ಕೂಟ ಸರ್ಕಾರವು ಕುಲಾಂತರಿ ಸಂಶೋಧನೆಗೆ ಹಣಕಾಸು ನೀಡುವುದನ್ನು ನಿಲ್ಲಿಸಬೇಕು. ದೇಶದಲ್ಲಿ ಕೀಟನಾಶಕಗಳ ಮಾರಾಟವನ್ನು ನಿಷೇಧಿಸಬೇಕು. ಸಹಜ ಬೇಸಾಯಕ್ಕೆ ಕರ್ನಾಟಕ ಸರ್ಕಾರ ಶೇಕಡಾ 75ರಷ್ಟು ಬಂಡವಾಳವನ್ನು ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಬಿ.ಎನ್ ಮಂಚೇಗೌಡ ಬೊಪ್ಪಸಮುದ್ರ, ಮುದ್ದೇಗೌಡ ರಾಜ್ಯ ರೈತ ಸಂಘ, ಚಂದ್ರಣ್ಣ ರಾಜ್ಯ ರೈತ ಸಂಘ, ನಾರಾಯಣ ಜಯಕರ್ನಾಟಕ ಸಂಘಟನೆ ಹಾಗೂ ಇನ್ನಿತರ ಸದಸ್ಯರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...