ಮಂಡ್ಯ | ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ; ಪತಿಯ ವಿರುದ್ಧ ಕೊಲೆ ಆರೋಪ

Date:

Advertisements

ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯದ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ.

ಮೃತ ಮಹಿಳೆ ಪದ್ಮ(36). ಇವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

“ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರೀತಿಸಿ ಮದುವೆಯಾದ ಬಳಿಕ ಚೆನ್ನಾಗಿಯೇ ಇದ್ದ ಸಂಸಾರದಲ್ಲಿ, ದಿನ ಕಳೆದಂತೆ ಜಗಳ ನಡೆಯುತ್ತಿತ್ತು. ಇದೀಗ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವಳು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

Advertisements

ಮೃತ ಮಹಿಳೆ ಪದ್ಮ ಪತಿ ಸಿದ್ದರಾಜು ಎಂಬಾತನ ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, “ಇದು ಆತ್ಮಹತ್ಯೆಯಲ್ಲ ಕೊಲೆ” ಎಂದು ದೂರಿದ್ದಾರೆ.

ರಾಮನಗರ ತಾಲೂಕಿನ ಅಂಕನಹಳ್ಳಿ ನಿವಾಸಿಯಾಗಿದ್ದ ಪದ್ಮ ಹಾಗೂ ಮಂಡ್ಯ ಮೂಲದ ಸಿದ್ದರಾಜು ಪ್ರೀತಿಸಿ, 13 ವರ್ಷದ ಹಿಂದೆ ಮದುವೆಯಾಗಿದ್ದರು. ಪತಿ ಸಿದ್ದರಾಜು ಹಣಕ್ಕಾಗಿ ಸಾಕಷ್ಟು ಪೀಡಿಸುತ್ತಿದ್ದ. ಆಗಾಗ ಗಲಾಟೆಯೂ ನಡೆಯುತ್ತಿತ್ತು” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ಅಂಚೆ ಸೇವಕ ಹುದ್ದೆಗಾಗಿ ಅಂಕಪಟ್ಟಿ ತಿದ್ದುಪಡಿ; 25 ಮಂದಿ ವಿರುದ್ಧ ಪ್ರಕರಣ ದಾಖಲು

“ಮದುವೆಯಾದ ಬಳಿಕ ಒಂದು ಬಾರಿಗೂ ತವರು ಮನೆಗೆ ಸಿದ್ದರಾಜು ಕಳುಹಿಸಲಿಲ್ಲ. ಅಲ್ಲದೆ ಸಂಬಂಧಿಕರನ್ನೂ ಕೂಡ ಮನೆಗೆ ಬರದಂತೆ ಒತ್ತಡ ಹಾಕುತ್ತಿದ್ದ. ಆತ್ಮಹತ್ಯೆ ಮಾಡಿಕೊಂಡ ನಂತರ ವಿಷಯ ತಿಳಿಸದೇ ಅಂತ್ಯಕ್ರಿಯೆಗೆ ತಯಾರಿ ಕೂಡ ಮಾಡಿಕೊಂಡಿದ್ದ” ಎಂದು ವಿಚಾರ ತಿಳಿದು ಮಂಡ್ಯಕ್ಕೆ ಬಂದ ಮಹಿಳೆ ಪದ್ಮ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಿದ್ದರಾಜು ಎಂಬಾತನನ್ನು ಪೂರ್ವಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X