ಮಂಡ್ಯ | ರೀಲ್ಸ್‌ ಮಾಡುತ್ತಿದ್ದ ಪತ್ನಿಯ ಮೇಲೆ ಅನುಮಾನ; ಯುವತಿಯನ್ನು ಕೊಂದ ದುರುಳ ಪತಿ

Date:

Advertisements

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ಮಾಡುತ್ತಿದ್ದ ಪತ್ನಿಯ ನಡತೆ ಮೇಲೆ ಅನುಮಾನಗೊಂಡಿದ್ದ ದುರುಳ ಪತ್ನಿಯೊಬ್ಬ ಆಕೆಯನ್ನು ಹತ್ಯೆಗೈರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಕೃತ್ಯಕ್ಕೆ ಹತ್ಯೆಗೊಳಗಾದ ಯುವತಿಯ ತಂದೆಯೂ ಸಹಕಾರ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಒಂದೇ ಗ್ರಾಮದವರಾಗಿದ್ದ ಮೃತ ಪೂಜಾ ಮತ್ತು ಆಕೆಯ ಪತಿ, ಆರೋಪಿ ಶ್ರೀನಾಥ್ ಪರಸ್ಪರ ಪ್ರೀತಿಸಿ ಒಂಬತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಪೂಜಾ ಅವರು ಆಗ್ಗಾಗ್ಗೆ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು. ಇದರಿಂದ ಪೂಜಾಳ ನಡತೆ ಬಗ್ಗೆ ಶಂಕಿಸಿದ್ದ ಆರೋಪಿ ಶ್ರೀನಾಥ್, ಆಕೆ ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನ ಪಡುತ್ತಿದ್ದ. ಆಗಸ್ಟ್‌ 7ರಂದು ಗಲಾಟೆ ಮಾಡಿ, ಆಕೆಯ ದುಪ್ಪಟ್ಟದಿಂದ ಆಕೆಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಕೊಲೆ ಬಗ್ಗೆ ತನ್ನ ಮಾವ (ಪೂಜಾಳ ತಂದೆ) ದೊರೆಸ್ವಾಮಿಗೆ ತಿಳಿಸಿದ್ದಾನೆ.

ನಂತರ ಮಾರನೇ ದಿನ (ಆಗಸ್ಟ್‌ 8) ಆರೋಪಿ ಶ್ರೀನಾಥ್ ಮತ್ತು ಮಾವ ದೊರೆಸ್ವಾಮಿ ಇಬ್ಬರೂ ಸೇರಿ ತರಕಾರಿ ತುಂಬುವ ಬ್ಯಾಗ್​​ನಲ್ಲಿ ಪೂಜಾಳ ದೇಹವನ್ನು ತುಂಬಿಕೊಂಡು ಮನೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿರೋ ಕಾವೇರಿ ನದಿಗೆ ಕೊಂಡೊಯ್ದಿದ್ದಾರೆ. ಅಲ್ಲಿ, ಮೃತದೇಹಕ್ಕೆ ಕಲ್ಲು ಕಟ್ಟಿ ನದಿಗೆ ಎಸೆದಿದ್ದಾರೆ. ಆ ಜಾಗದಲ್ಲಿ ಹೆಚ್ಚು ಮೊಸಳೆಗಳಿದ್ದು, ಮೊಸಳೆಗಳು ಮೃತದೇಹವನ್ನು ತಿಂದುಹಾಕುತ್ತವೆ ಎಂದು ದುರುಳರು ಭಾವಿಸಿದ್ದರು ಎಂದು ಹೇಳಲಾಗಿದೆ.

Advertisements

ಆದರೆ, ಬುಧವಾರ ಆಕೆಯ ಮೃತದೇಹ ನದಿ ದಡದಲ್ಲಿ ಕಂಡುಬಂದಿದೆ. ಮೃತದೇಹವನ್ನು ನೋಡಿದ ಫಾರೆಸ್ಟ್ ಗಾರ್ಡ್ ಒಬ್ಬರು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರನ್ನೂ ಬಂಧಿಸಿದ್ದಾರೆ. ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X