ಮಂಡ್ಯ | ಎಕ್ಸ್​ಪ್ರೆಸ್​ ವೇ ಎಂಟ್ರಿ ಮತ್ತು ಎಕ್ಸಿಟ್ ಬಂದ್‌; ಸವಾರರ ಪರದಾಟ

Date:

Advertisements

ಟೋಲ್ ಸಂಗ್ರಹದ ನೆಪದಲ್ಲಿ ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಮತ್ತು ಎಕ್ಸಿಟ್​​​ಗಳನ್ನು ಕ್ಲೋಸ್ ಮಾಡಲಾಗಿದೆ, ಹೀಗಾಗಿ, ಬೆಂಗಳೂರಿನಿಂದ ಮಂಡ್ಯಕ್ಕೆ, ಮೈಸೂರಿನಿಂದ ಮಂಡ್ಯಕ್ಕೆ, ಮಂಡ್ಯದಿಂದ ಮೈಸೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸದಾ ವಿವಾದಗಳಿಗೆ ಸುದ್ದಿಯಾಗಿದೆ. ಈ ಹಿಂದೆ, ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಎಂಟ್ರಿ ಹಾಗೂ ಎಕ್ಸಿಟ್​​ಗಳು ಇರಲಿಲ್ಲ. ನೇರವಾಗಿ ಬೆಂಗಳೂರಿನಿಂದ ಮೈಸೂರು ಸಂಚಾರಕ್ಕೆ ಮಾತ್ರ ಅವಕಾಶ ಇತ್ತು. ಆನಂತರ ಪ್ರತಿಭಟನೆ, ಹೋರಾಟಗಳು ನಡೆದ ನಂತರ ಜಿಲ್ಲಾ ಹಾಗೂ ತಾಲೂಕು ಕೇಂದ್ರ ಸಂಪರ್ಕ ಕಲ್ಪಿಸಲು ಎಲ್ಲ ಪಟ್ಟಣಗಳ ಬಳಿ ಎಂಟ್ರಿ ಹಾಗೂ ಎಕ್ಸಿಟ್ ಕಲ್ಪಿಸಲಾಗಿತ್ತು.

ಆದರೆ, ಇದೀಗ ಟೋಲ್ ಸಂಗ್ರಹದ ನೆಪವೊಡ್ಡಿ, ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಹಾಗೂ ಎಕ್ಸಿಟ್​​​ಗಳನ್ನ ಕ್ಲೋಸ್ ಮಾಡಲಾಗಿದೆ. ಹೀಗಾಗಿ, ಮಂಡ್ಯದಿಂದ ಮೈಸೂರು ಮತ್ತು ಬೆಂಗಳೂರು ಕಡೆಗೆ ಪ್ರಯಾಣಿಸುವ ವಾಹನಗಳು ಸರ್ವಿಸ್ ರಸ್ತೆಯಲ್ಲಿಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

Advertisements

ಈಗಾಗಲೇ, ಎಕ್ಸ್‌ಪ್ರೆಸ್‌ ವೇನಲ್ಲಿ ದುಬಾರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಬೆಂಗಳೂರಿನ ಕಣಮಿಣಿಕೆ ಮತ್ತು ಮಂಡ್ಯದ ಗಣಂಗೂರು ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಬೆಂಗಳೂರಿನಿಂದ ಬರುವ ವಾಹನ ಸವಾರರು ಪಾಂಡವಪುರಕ್ಕೆ ಹೋಗಬೇಕಾದರೆ, ಇಂಡವಾಳು ಬಳಿ ಎಕ್ಸ್‌ಪ್ರೆಸ್‌ ವೇನಿಂದ ಹೊರ ಬರುತ್ತಿದ್ದರು. ಆದರೆ, ಇದೀಗ ಆ ಎಕ್ಸಿಟ್ಅನ್ನು ಕ್ಲೋಸ್ ಮಾಡಲಾಗಿದೆ.

ಇನ್ನು ಮಂಡ್ಯದಿಂದ ಮೈಸೂರಿಗೆ ಹೋಗುವವರು ಇಂಡುವಾಳು ಬಳಿ ಇರುವ ಎಂಟ್ರಿ ಮೂಲಕ ಎಕ್ಸ್‌ಪ್ರೆಸ್‌ ವೇಗೆ ಬರುತ್ತಿದ್ದರು. ಎಂಟ್ರಿಯನ್ನು ಬಂದ್‌ ಮಾಡಲಾಗಿದ್ದು, ಮಂಡ್ಯದಿಂದ ಮೈಸೂರಿನವರೆಗೂ ಸರ್ವೀಸ್‌ ರಸ್ತೆಯಲ್ಲೇ ಪ್ರಯಾಣಿಸಬೇಕಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X