ಮಂಡ್ಯ | ವ್ಯಾಪಾರಿ ಮೇಲೆ ಲೇವಾದೇವಿದಾರನಿಂದ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಂದ ಮೀನಮೇಷ!

Date:

Advertisements

ಮಂಡ್ಯ ನಗರದ ಬಟ್ಟೆ ವ್ಯಾಪಾರಿಯೊಬ್ಬರ ಮೇಲೆ ಕಳೆದ ನ.6ರಂದು ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಡ್ಯ ಪೊಲೀಸರಿಗೆ ದೂರು ನೀಡಿದ್ದರೂ, ಎಫ್ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಮಂಡ್ಯ ನಗರದ ಕೆ.ಆರ್.ರಸ್ತೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದ ವಾಸೀಂವುಲ್ಲಾ ಷರೀಫ್ ಎಂಬಾತನ ಮೇಲೆ ಲೇವಾದೇವಿದಾರ ರಘು ಎಂಬಾತ ಹಲ್ಲೆ ನಡೆಸಿರುವ ಬಗ್ಗೆ ಹಲವು ದಾಖಲಾತಿಗಳ ಜತೆಯಲ್ಲಿ ಮಂಡ್ಯದ ಪಶ್ಚಿಮ ಠಾಣೆಗೆ ದೂರು ನೀಡಲಾಗಿದೆ. ಆದರೆ ಪೊಲೀಸರು ಎಫ್ಐಆರ್ ದಾಖಲಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂಬ ಮಾಹಿತಿಯನ್ನು ಸಂಬಂಧಿತ ವಕೀಲರು ಈ ದಿನ.ಕಾಮ್ ಜೊತೆ ಮಾತನಾಡಿ ನೀಡಿದ್ದಾರೆ.

ಮಂಡ್ಯದಲ್ಲಿ ಬಡ್ಡಿ, ಲೇವಾದೇವಿ ಅಕ್ರಮ ದಂಧೆ ಯಾವುದೇ ಕಡಿವಾಣ ಇಲ್ಲದೆ ಜರುಗುತ್ತಿದೆ. ಆದರೆ ಇಂತಹ ಅಕ್ರಮ ದಂಧೆ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಕಣ್ಮಚ್ಚಿ ಕುಳಿತಿದ್ದಾರೆಂದು ಹಲ್ಲೆಗೊಳಗಾದ ವಾಸೀಂವುಲ್ಲಾ ಷರೀಫ್ ದೂರಿದ್ದಾರೆ.

Advertisements

ರಘು ಸಾಲವಾಗಿ ಹಣವನ್ನು ನೀಡಿದ ಸಂದರ್ಭದಲ್ಲಿ ಖಾಲಿ ಚೆಕ್‌ಗಳನ್ನು ಪಡೆದಿದ್ದಾನೆ. ಆದರೆ ಸಾಲ ತೀರಿಸಿದ ನಂತರವೂ ಖಾಲಿ ಚೆಕ್‌ಗಳನ್ನು ನೀಡದೇ, ಇನ್ನೂ ಸಾಲ ಬಾಕಿ ಉಳಿದಿದೆ, ತೀರಿಸು ಎಂದು ಅವಾಚ್ಯ ಶಬ್ದಗಳಿಂದ ಬೈದು, ಒತ್ತಡ ಹೇರುತ್ತಿದ್ದಾನೆ, ಹಾಗೇ ಹಣ ವಸೂಲಿ ನೆಪದಲ್ಲಿ ಬಂದಿದ್ದು, ಈ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿದ್ದಾರೆ.

ರಘು ತನ್ನ ಮೇಲೆ ಬಲವಾಗಿ ಹಲ್ಲೆ ನಡೆಸಿದ ಬಗ್ಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಎಂ.ಎಲ್.ಸಿ ದಾಖಲಿಸಿ, ದೂರು ನೀಡಿದ್ದರೂ, ರಘು ಮೇಲೆ ಎಫ್ಐಆರ್ ದಾಖಲಿಸಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆಂದು ವಾಸೀಂವುಲ್ಲಾ ಷರೀಫ್ ತಿಳಿಸಿದ್ದು, ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿ ಆರೋಪಿ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಹಿಂದಕ್ಕೆ ಚಲಿಸಿ ಗ್ಯಾರೇಜಿಗೆ ನುಗ್ಗಿದ ಗ್ರಾನೈಟ್‌ ತುಂಬಿದ್ದ ಲಾರಿ: ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು!

ಹಲ್ಲೆ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರನ್ನು ಹಲ್ಲೆಗೊಳಗಾದ ಬಟ್ಟೆ ವ್ಯಾಪಾರಿ ವಕೀಲರ ಜೊತೆಗೆ ಹೋಗಿ ದಾಖಲು ಮಾಡಿರುತ್ತಾನೆ. ಆ ಪ್ರಕರಣದಲ್ಲಿ ಇನ್ನೂ ಎಫ್ಐಆರ್ ದಾಖಲಾಗದಿರುವುದು ಅಚ್ಚರಿಯ ಸಂಗತಿ. ಇದುವರೆಗೆ ಎಫ್‌ಐಆರ್ ದಾಖಲು ಆಗದಿರಲು ಕಾರಣ ಏನು? ಪಶ್ಚಿಮ ಠಾಣೆಯ ಪೊಲೀಸರು ಉತ್ತರಿಸಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X