ಮಂಡ್ಯ | ಮಹಿಳೆಗೆ ಪೊಲೀಸರಿಂದ ಹಲ್ಲೆ ಆರೋಪ; ಪ್ರಗತಿಪರ, ಮಹಿಳಾ ಸಂಘಟನೆಗಳ ಆಕ್ರೋಶ

Date:

Advertisements

ಮಹಿಳೆಗೆ ಥಳಿಸಿ ದೌರ್ಜನ್ಯ ನಡೆಸಿರುವ ಆರೋಪ ಸಂಬಂಧ ಮಂಡ್ಯ ನಗರದ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. “ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್‌ನಲ್ಲಿ ತಮ್ಮ ಮನೆ ಮುಂದೆ ಹಸು ಕಟ್ಟಿ ಹಾಕಿದ್ದ ಮಹಿಳೆ ರೂಪಾದೇವಿ ವಿರುದ್ಧ ಯಾವುದೇ ದೂರು ಇಲ್ಲದಿದ್ದರೂ ಅಮಾಯಕ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬಲವಂತವಾಗಿ ಜೀಪಿಗೆ ಹತ್ತಿಸಿಕೊಂಡು ಠಾಣೆಗೆ ಕರೆತಂದು, ಕೋಣೆಯೊಂದರಲ್ಲಿ ಕೂಡಿ ಹಾಕಿ ಸಬ್ ಇನ್‌ಸ್ಪೆಕ್ಟರ್ ಅಯ್ಯನ್ ಗೌಡ ಮತ್ತು ಸಿಬ್ಬಂದಿ ಮನ ಬಂದಂತೆ ಥಳಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ಮಹಿಳೆ ಮೇಲೆ ಪೊಲೀಸರು ಗೂಂಡಾ ವರ್ತನೆ ತೋರಿರುವುದು ಸಂವಿಧಾನ ವಿರೋಧಿಯಾಗಿದ್ದು, ಮಾನವ ಹಕ್ಕು ಹಾಗೂ ಮಹಿಳೆಯರ ಹಕ್ಕುಗಳನ್ನು ದಮನ ಮಾಡುವ ವರ್ತನೆ ಕಾನೂನು ಬಾಹಿರವಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾಗಿದ್ದಾರೆ. ಗೂಂಡಾ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಕರ್ನಾಟಕ ಜನಶಕ್ತಿಯ ಪೂರ್ಣಿಮಾ, ಸಿದ್ದರಾಜು, ಮಂಗಲ ಲಂಕೇಶ್ ಸಿಐಟಿಯುನ ಸಿ ಕುಮಾರಿ, ಸಿಪಿಐಎಂ ಪಕ್ಷದ ಟಿ ಎಲ್ ಕೃಷ್ಣೇಗೌಡ, ರೈತ ಸಂಘದ ಸುನಂದ ಜಯರಾಮ್, ಲತಾ ಶಂಕರ್, ರಾಷ್ಟ್ರೀಯ ಭಾರತೀಯ ಮಾನವ ಹಕ್ಕುಗಳ ಸಂಘದ ರಾಧಾಮಣಿ ಬಿ ಪಿ, ಎ ಬಿ ಶಶಿಕಲಾ, ವಿಮೋಚನಾ ಮಹಿಳಾ ಸಂಘಟನೆಯ ಜನಾರ್ದನ, ಸಿದ್ದರಾಜು ಎಂ ಪ್ರತಿಭಟನೆಯಲ್ಲಿ ಇದ್ದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಘಟನೆಗೆ ಸಂಬಂಧಿಸಿದಂತೆ ನಗರದ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಅಯ್ಯನಗೌಡ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಆದೇಶಿಸಿದ್ದಾರೆ.

ಸಂತ್ರಸ್ತೆ ರೂಪದೇವಿಯವರ ತಾಯಿ ಗೌರಮ್ಮ ನೀಡಿದ ದೂರಿನನ್ವಯ ಅಯ್ಯನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X