ಮಂಡ್ಯ | ವಿದ್ಯಾರ್ಥಿನಿ ಕಪಾಳಕ್ಕೆ ಹೊಡೆದ ಮಹಿಳಾ ಕಂಡಕ್ಟರ್

Date:

Advertisements

‘ಟಿಕೆಟ್ ಕೊಡಿ ಅಜ್ಜಿ’ ಎಂದು ಕೇಳಿದ್ದಕ್ಕೆ ಸಿಟ್ಟಾದ ಮಹಿಳಾ ಕಂಡಕ್ಟರ್ ಒಬ್ಬರು ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿರುವ ಘಟನೆ ಮಂಡ್ಯದ ಭಾರತಿನಗರ ಬಸ್‍ನಲ್ಲಿ ನಡೆದಿದೆ.

ಭಾರತೀನಗರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಕಾವ್ಯಶ್ರಿ ಎಂಬಾಕೆ ಟಿಕೆಟ್ ಪಡೆಯುವಾಗ ಮಹಿಳಾ ಕಂಡಕ್ಟರ್ ಸೌಭಾಗ್ಯ ಎಂಬುವವರಿಗೆ ‘ಅಜ್ಜಿ’ ಎಂದು ಕರೆದಿದ್ದಾಳೆ. ಪ್ರಯಾಣಿಕರು ಹೆಚ್ಚಿದ್ದ ಕಾರಣ ಅವರ ಕಣ್ಣು ಕೆಂಪಗಾಗಿದೆ. ‘ನಿನಗೆ ನಾನು ಅಜ್ಜಿಯಂತೆ ಕಾಣುತ್ತೇನಾ?’ ಎಂದು ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದಿದ್ದಾರಂತೆ.

ಮನನೊಂದ ವಿದ್ಯಾರ್ಥಿನಿ ಕಾವ್ಯಶ್ರೀ ಸ್ಥಳದಲ್ಲಿಯೇ ಬಸ್‍ ನಿಲ್ಲಿಸುವಂತೆ ಹೇಳಿ ನೇರವಾಗಿ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಸೌಭಾಗ್ಯ ವಿರುದ್ಧ ದೂರು ದಾಖಲಿಸಿದ್ದಾಳೆ.

Advertisements

“ಬಸ್‍ನಲ್ಲಿ ಪ್ರಯಾಣಿಕರು ಹೆಚ್ಚಿದ್ದ ಕಾರಣ ನನಗೆ ಮುಜುಗರವಾಗುವಂತೆ ವಿದ್ಯಾರ್ಥಿನಿ ನಡೆದುಕೊಂಡಿದ್ದಾಳೆ. ನನಗೆ ಅಜ್ಜಿ ಎಂದು ಕರೆಯುವ ಮೂಲಕ ಅವಮಾನ ಮಾಡಿದ್ದಾಳೆ. ಹೀಗಾಗಿ ನಾನು ಆಕೆಯ ಕಪಾಳಕ್ಕೆ ಹೊಡೆದೆ” ಎಂದು ನಿರ್ವಾಹಕಿ ಸೌಭಾಗ್ಯ ತಿಳಿಸಿರುವುದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ವಿದ್ಯಾರ್ಥಿನಿ ಕಾವ್ಯಶ್ರೀ ಸಂಬಂಧಿಕರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಠಾಣೆಯ ಎದುರು ಬಂದು ಪ್ರತಿಭಟನೆ ನಡೆಸಿದ್ದು, ನಿರ್ವಾಹಕಿ ಸೌಭಾಗ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ನಿರ್ವಾಹಕಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎನಿಸುತ್ತದೆ. ಹಲವಾರು ಬಾರಿ ನಾನು ಈ ನಿರ್ವಾಹಕಿಯ ವರ್ತನೆಯನ್ನು ನೋಡಿದ್ದೇನೆ.

    ಯಾವುದೇ ಪ್ರಯಾಣಿಕರೊಂದಿಗೂ ಸರಿಯಾಗಿ ಗುರವಾಯುತವಾಗಿ ವರ್ತಿಸುವುದಿಲ್ಲ, ಹಾಗಾಗಿ ಇಲಾಖೆ ಈ ನಿರ್ವಾಹಕಿಯ ಬಗೆಗೆ ಸೂಕ್ತವಾದ ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X