ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಮಹಿಳೆಯೊಬ್ಬರು ಪ್ಲಾಟ್ಫಾರ್ಮ್ ನಂ.2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿದೆ. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ತೋರಣಗಲ್ಲು-ಗುಂತಕಲ್ ನಡುವೆ ರೈಲು ಸಂಚಾರ ಭಾಗಶಃ ರದ್ದು
ಮಹಿಳೆಯ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.