ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರಿನ ಕಾಡುಕೊತ್ತನಹಳ್ಳಿಯಲ್ಲಿರುವ 800 ವರ್ಷಗಳಷ್ಟು ಹಳೆಯದಾಗಿರುವ ವೀರಭದ್ರೇಶ್ವರ ದೇವಾಲಯದಲ್ಲಿ ದ್ವಾರ ಪೂಜೆ ಸಲ್ಲಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
“ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಸಂಕೇತವಾದ ಹಳೆಯ ದೇವಾಲಯಗಳನ್ನು ಸಂರಕ್ಷಿಸುವ ಅಗತ್ಯತೆ ಇದೆ ಎಂದು ಜಾಗೃತಿ ಮೂಡಿಸಿದ್ದು, ದೇವಾಲಯದ ಆವರಣದ ಒಳಗೆ ಮತ್ತು ಹೊರಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.
ಮದ್ದೂರಿನ ಕಾಡುಕೊತ್ತನಹಳ್ಳಿಯಲ್ಲಿ ಹಳೆಯ ದೇವಾಲಯವಿದ್ದ ಸ್ಥಳದಲ್ಲಿ ಗ್ರಾಮಸ್ಥರು ನವೀಕರಣ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ದೇವಾಲಯದ ಹೊರಗೆ ಹೊಸದಾಗಿ ಸ್ಥಾಪಿಸಿರುವ ಬಾಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಯದುವೀರ್ ಅವರು ಕಾಮಗಾರಿಗಳಿಗೆ ಉದ್ಘಾಟನೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಪ್ರೇಮ ಪ್ರಕರಣ | ತುಮಕೂರಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಹಾಸನದಲ್ಲಿ ಪತ್ತೆ