ಮಂಡ್ಯ | ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು: ಸಾಹಿತಿ ಸತೀಶ್ ಜವರೇಗೌಡ

Date:

Advertisements

“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಕರೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ  ‘ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವ’ದ ಅಂಗವಾಗಿ ಪರಿವರ್ತನಾ ಕಾಲೇಜಿನಲ್ಲಿ ‘ದಸರಾ ಯುವ ಕವಿಗೋಷ್ಠಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಮಾಜದಲ್ಲಿ ಹಿಂಸೆ ಮತ್ತು ಕ್ರೌರ್ಯದ ವಿಕೃತ ಮನೋಭಾವ ಹೆಚ್ಚುತ್ತಿದೆ. ಇದರಿಂದ ಮಹಿಳೆಯರ ಮೇಲಿನ ದೌರ್ಜ್ಯನ ಮತ್ತು ಕೋಮು-ಗಲಭೆಗಳು ಹೆಚ್ಚಾಗುತ್ತವೆ. ಹಾಗಾಗಿ ಸಮಾಜದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದ್ದು, ಅಪಾಯಕಾರಿ ಬೆಳವಣಿಗೆ ಹೆಚ್ಚುತ್ತಿದೆ” ಎಂದರು.

Advertisements

“ಸಾಹಿತ್ಯದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯವಿದೆ. ಆದ್ದರಿಂದ ಕವಿಗಳು ಜವಾಬ್ದಾರಿಯಿಂದ ಕಾವ್ಯ ರಚಿಸಬೇಕು. ಜಾತಿ, ಮತ, ಪಂಥ, ಪಕ್ಷ, ವೈಯಕ್ತಿಕ ನೆಲೆಗಳನ್ನು ಮೀರಿ ವಿಶ್ವಾತ್ಮಕ ನೆಲೆಯಲ್ಲಿ ಕಾವ್ಯ ರಚಿಸಬೇಕು. ಆಗ ಉತ್ತಮವಾದ ಸಮಾಜಮುಖಿ ಮತ್ತು ಜೀವನ್ಮುಖಿಯಾದ ಕಾವ್ಯ ಸೃಷ್ಟಿಯಾಗುತ್ತದೆ. ಕವಿಗಳು ಸಾಹಿತ್ಯ ಪ್ರತಿಭೆಯ ಅಭಿವ್ಯಕ್ತಿಗೆ ಸಾಮಾಜಿಕ ಜಾಲತಾಣ ಮುಕ್ತ ವೇದಿಕೆಯನ್ನು ಕಲ್ಪಿಸಿದೆ. ಇದನ್ನು ಸಮರ್ಥವಾಗಿ ಬಳಸಿಕೊಂಡು ಸಹೃದಯರಿಗೆ ಸಾಹಿತ್ಯ ತಲುಪಿಸಬೇಕು. ಆದರೆ ಬರೆದುದ್ದೆಲ್ಲವನ್ನು ಪ್ರಕಟಿಸುವ ಮುನ್ನ ತಿದ್ದಿ ತೀಡಿ ಸಂಯಮದಿಂದ ಪರಿಷ್ಕರಿಸಬೇಕು. ಆಗ ಸಾಹಿತ್ಯಕ್ಕೆ ಗಟ್ಟಿತನ ಬರುತ್ತದೆ” ಎಂದು ಯುವ ಕವಿಗಳಿಗೆ ಸಜಗೌ ಅವರು ಸಲಹೆ ನೀಡಿದರು.

ಯುವ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಸಾ.ವೆ.ರಾ. ಸ್ವಾಮಿ‌ ಮಾತನಾಡಿ, “ಕವಿಗಳು ತಮ್ಮ ಅನುಭವಗಳನ್ನು ಕಾವ್ಯದಲ್ಲಿ ತರಬೇಕು. ಬೇರೆಯವರ ನೋವುಗಳನ್ನು ತಮ್ಮದೆಂದು ಪರಿಭಾವಿಸಿ ಬರೆಯಬೇಕು. ಆಗ ಉತ್ತಮ ಕಾವ್ಯವಾಗುತ್ತದೆ ಎಂದರು.

ಯುವ ಕವಿಗೋಷ್ಠಿಯನ್ನು ಕಾಟಾಚಾರಕ್ಕೆ ಯೋಜಿಸಬಾರದು. ಇದನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸುವ ಬದಲು ಶ್ರೀರಂಗ ಮುಖ್ಯ ವೇದಿಕೆಯಲ್ಲಿ ವ್ಯವಸ್ಥೆ ಮಾಡಬೇಕಿತ್ತು. ಕವಿಗಳನ್ನು‌ ಗೌರವಪೂರ್ವಕವಾಗಿ ಆಹ್ವಾನಿಸಬೇಕು. ಕವಿಗಳಿಗೆ ಸಕಾಲಕ್ಕೆ ಆಹ್ವಾನ ಪತ್ರಿಕೆಯನ್ನು ತಲುಪಿಸಬೇಕಿತ್ತು ಎಂದು ಸಾಹಿತಿ ಸಾ.ವೆ.ರಾ. ಸ್ವಾಮಿ ಆಯೋಜಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಗಿಡ ನೆಡುವ ಮೂಲಕ ಜಯಕರ್ನಾಟಕ ಜನಪರ…

ವೇದಿಕೆಯಲ್ಲಿ‌ ಜಿಲ್ಲಾ ಕಸಾಪ ಅಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿ  ಡಾ. ಹುಸ್ಕೂರು ಕೃಷ್ಣೇಗೌಡ, ತಾಲ್ಲೂಕು ಅಧ್ಯಕ್ಷ ಸಿದ್ದಲಿಂಗು, ನಿಕಟಪೂರ್ವ ಅಧ್ಯಕ್ಷ ಎಂ.ಬಿ. ಕುಮಾರ್, ಪದಾಧಿಕಾರಿಗಳಾದ ಸಿ. ಸ್ವಾಮಿಗೌಡ, ಗಂಜಾಂ ಸುರೇಶ್, ಕೆ.ಬಿ. ಬಸವರಾಜ್ ಉಪಸ್ಥಿತರಿದ್ದರು. ಇಪ್ಪತ್ತಕೂ ಹೆಚ್ಚಿನ‌ ಕವಿಗಳು ತಮ್ಮ ಕವನಗಳ ವಾಚಿಸಿ ಗಮನ ಸೆಳೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X