ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

Date:

Advertisements

ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ ಜಾರಿಗಾಗಿ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡಿದರು. “ಚಾತುರ್ವಣಗಳಲ್ಲಿ ಈಗ ಉಳಿದಿರುವುದು ಬ್ರಾಹ್ಮಣ ಮತ್ತು ಶೂದ್ರ ಮಾತ್ರ. ಬ್ರಾಹ್ಮಣರಲ್ಲಿ ಮಹಿಳೆಯರಿಗೆ ಉಪನಯನ ಇಲ್ಲ, ಜನಿವಾರ ಧರಿಸುವಂತಿಲ್ಲ. ಯಾರೂ ಜನಿವಾರ ಹಾಕುವುದಿಲ್ಲವೋ ಅವರೆಲ್ಲರೂ ಶೂದ್ರರೇ” ಎಂದಿದ್ದಾರೆ.

“ಸ್ವಾಮಿ ವಿವೇಕಾನಂದ ಅವರನ್ನು ಹಿಂದು ಧರ್ಮದ ಪ್ರತಿಪಾಕರು ಎಂದು ಕೆಲವು ಬಲಪಂಥೀಯರು ಬಿಂಬಿಸಲು ಹೊರಟಿದ್ದಾರೆ. ಆದರೆ, ಅವರು ವಾಸ್ತವದಲ್ಲಿ ಮೇಲು ಕೀಳಿನಿಂದ ಕೂಡಿದ್ದ, ಅಸಮಾನತೆಯ ಹಿಂದು ಧರ್ಮದ ಕಟು ಟೀಕಾಕಾರರಾಗಿದ್ದರು. ಅವರು ನಾನೊಬ್ಬ ಬೌದ್ಧ ಎಂದು ಹೇಳಿಕೊಂಡಿದ್ದರು. ನನ್ನದು ಸಂಕುಚಿತ ಹಿಂದು ಧರ್ಮವಲ್ಲ, ಬದಲಾಗಿ ಮಾನವ ಧರ್ಮ ಎಂದಿದ್ದರು” ಎಂದು ಭಗವಾನ್ ಪ್ರತಿಪಾದಿಸಿದ್ದಾರೆ.

Advertisements

Bhagavan

“ರಾಷ್ಟ್ರಕವಿ ಕುವೆಂಪು ಕಾನೂನು ಹೆಗ್ಗಡತಿ ಹಾಗೂ ಮಲೆಗಳಲ್ಲಿ ಮದುಮಗಳು ಕೃತಿಯಲ್ಲಿ ಹಿಂದು ಧರ್ಮವನ್ನು ಸಿಗಿದು ತೋರಣ ಕಟ್ಟಿದ್ದಾರೆ” ಎಂದಿದ್ದಾರೆ.

“ಪೆರಿಯಾರ್, ನಾರಾಯಣಗುರು, ಅಂಬೇಡ್ಕರ್ ಹಿಂದೂ ಧರ್ಮದಲ್ಲಿನ ಮೌಢ್ಯ, ಅಂಧಕಾರ, ಶೋಷಣೆ ವಿರುದ್ಧ ನಿರಂತರ ಹೋರಾಟ ನಡೆಸಿದ್ದಾರೆ, ಹಾಗಾಗಿ ಬುದ್ಧ, ಅಶೋಕ, ಬಸವಣ್ಣ, ಸ್ವಾಮಿ ವಿವೇಕಾನಂದರ ಜೊತೆಗೆ ಇಂತಹ ಮಹನೀಯರ ಅಧ್ಯಯನ ಮಾಡಬೇಕು, ಅಂಬೇಡ್ಕರ್ ನಮ್ಮವರು ಎಂದರೆ ಬಲ ಬರಲ್ಲ, ಬದಲಾಗಿ ಅವರ ಬದುಕು -ಬರಹ ಮತ್ತು ವಿಚಾರದ ಪುಸ್ತಕಗಳನ್ನು ಓದಬೇಕು, ವಿಶೇಷವಾಗಿ ಜಾತಿ ವಿನಾಶ ಸಂಪುಟವನ್ನು ಓದಿ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅಧ್ಯಕ್ಷತೆ ವಹಿಸಿದ್ದರು, ರಾಜ್ಯ ಸಂಪನ್ಮೂಲ ಕೇಂದ್ರದ ಮಾಜಿ ನಿರ್ದೇಶಕ ಡಾ.ಎಸ್.ತುಕಾರಾಂ, ವಿಚಾರವಾದಿ ಮಾಯಿಗೌಡ ಸೇರಿದಂತೆ ಮತ್ತಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X