ಮಂಡ್ಯ | ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸ್ಥಳದಲ್ಲೇ ಸಾವು

Date:

Advertisements

ರಸ್ತೆ ಬದಿ ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗೆ ವೇಗವಾಗಿ ಬಂದ್ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ​ಹಾಸನ ಕಡೆಯಿಂದ ಬಂದ KA-02 MM 1802 ನಂಬರಿನ ಸ್ವಿಫ್ಟ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ವೇಗವಾಗಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Advertisements

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್​ನೊಳಗೆ ಹೊಕ್ಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತರನ್ನು ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.

Advertisements
Bose Military School

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಆ್ಯಪ್ ಬಿಡುಗಡೆ ; ಬಸ್‌ಗಳ ನೈಜ ಸಮಯ ಲಭ್ಯ

ಘಟನೆ ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಜನವಾಡದಲ್ಲಿ ₹5 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ನಿರ್ಮಾಣ : ಸಚಿವ ರಹೀಂ ಖಾನ್

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ...

‘ಮಂಗಳೂರ ಸಮಾಚಾರ’ ಆರಂಭಿಸಿದ್ದ ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ : ಸದಾಶಿವ ಉಳ್ಳಾಲ್

ಕನ್ನಡದ ಪ್ರಥಮ ಪತ್ರಿಕೆ 'ಮಂಗಳೂರ ಸಮಾಚಾರ' ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ...

ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ...

ಮೈಸೂರು | ಸಚಿವ ಮಹದೇವಪ್ಪ ಸುತ್ತ ಜಾತೀಯತೆ ಆರೋಪ; ಕಾಂಗ್ರೆಸ್ಸಿಗರು ಹೇಳಿದ್ದೇನು?

ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ...

Download Eedina App Android / iOS

X