ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

Date:

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ( ಹಂತ-4 )ಸ್ಥಳೀಯ ಸಂಸ್ಥೆಗಳಿಗೆ ಅನುಮೋದನೆಯಾದ ಕ್ರಿಯಾಯೋಜನೆಗಳ ಪೈಕಿ ಪ್ರಾರಂಭವಾಗದೆ ಇರುವ ಕಾಮಾಗಾರಿಗಳನ್ನು ಮಂಡ್ಯ ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಿ ಟೆಂಡರ್ ಕರೆದು ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

- Advertisement -

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ(ಹಂತ-4) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ(ಹಂತ-4) ಜಿಲ್ಲೆಗೆ ಒಟ್ಟು 105 ಕೋಟಿ ರೂ. ಹಂಚಿಕೆಯಾಗಿದೆ. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ವೇಳೆ ಶಾಸಕರುಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಹಂತ ಹಂತವಾಗಿ ಪೂರ್ಣಗೊಳಿಸಿ” ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕುಡಿಯುವ ನೀರು, ಒಳಚರಂಡಿ, ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ಧಿ ನಗರೋತ್ಥಾನದ ಉದ್ದೇಶವಾಗಿದ್ದು, ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಿ” ಎಂದು ಅಧಿಕಾರಿಗಳಿಗೆ ತಿಳಿಸಿದರು.

“ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 8 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 3 ಟೆಂಡರ್ ಕರೆಯಬೇಕಿದ್ದು, 9 ಕಾಮಗಾರಿಗಳು ಪೂರ್ಣಗೊಂಡಿವೆ. ಮದ್ದೂರು ವ್ಯಾಪ್ತಿಯಲ್ಲಿ 6 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳನ್ನು ಟೆಂಡರ್ ಕರೆಯಬೇಕಿದೆ. 7 ಕಾಮಗಾರಿಗಳು ಪೂರ್ಣಗೊಂಡಿವೆ. ಮಳವಳ್ಳಿ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 4 ಟೆಂಡರ್ ಕರೆಯಬೇಕಿದ್ದು, 8 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು ಸಭೆಗೆ ಮಾಹಿತಿ ನೀಡಿದರು.

“ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳನ್ನು ಟೆಂಡರ್ ಕರೆಯಬೇಕಿದ್ದು, 10 ಕಾಮಗಾರಿಗಳು ಪೂರ್ಣಗೊಂಡಿವೆ. ಕೆ.ಆರ್ ಪೇಟೆ ವ್ಯಾಪ್ತಿಯಲ್ಲಿ 3 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 7 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 5 ಕಾಮಗಾರಿಗಳು ಪೂರ್ಣಗೊಂಡಿವೆ. ಪಾಂಡವಪುರ ವ್ಯಾಪ್ತಿಯಲ್ಲಿ 7 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 10 ಕಾಮಗಾರಿಗಳ ಟೆಂಡರ್ ಕರೆಯಬೇಕಿದೆ. 1 ಕಾಮಗಾರಿ ಪೂರ್ಣಗೊಂಡಿದೆ. ನಾಗಮಂಗಲ ವ್ಯಾಪ್ತಿಯಲ್ಲಿ 4 ಕಾಮಾಗಾರಿಗಳು ಪ್ರಗತಿಯಲ್ಲಿದ್ದು, 5 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿದೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 6 ಕಾಮಗಾರಿಗಳು ಪೂರ್ಣಗೊಂಡಿವೆ. ಬೆಳ್ಳೂರು ವ್ಯಾಪ್ತಿಯಲ್ಲಿ 6 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 1 ಕಾಮಗಾರಿಯ ಟೆಂಡರ್ ಕರೆಯಬೇಕಿದ್ದು, 7 ಕಾಮಗಾರಿಗಳು ಪೂರ್ಣಗೊಂಡಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

“ಸ್ವಚ್ಛ ಭಾರತ್ ಯೋಜನೆಯಡಿ ಮದ್ದೂರು ಪುರಸಭೆ- 72.75 ಲಕ್ಷ ರೂ, ಮಳವಳ್ಳಿ ಪುರಸಭೆ- ರೂ 34.70 ಲಕ್ಷ ರೂ, ಶ್ರೀರಂಗಪಟ್ಟಣ ಪುರಸಭೆ- 67.08 ಲಕ್ಷ ರೂ, ಕೆ ಆರ್ ಪೇಟೆ ಪುರಸಭೆ- 26.07 ಲಕ್ಷ ರೂ ಲಭ್ಯವಿದ್ದು, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.

ಸಭೆಯಲ್ಲಿ ಶಾಸಕರುಗಳಾದ ಪಿ ಎಂ ನರೇಂದ್ರಸ್ವಾಮಿ, ಪಿ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ‌ ಎಂ ಉದಯ್, ಕೆ ಟಿ ಮಂಜು, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಯ ಶೇಖ್ ತನ್ವಿ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್‌ ಯತೀಶ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀರಂಗಪಟ್ಟಣ | ಇದು ಸ್ಟಾರ್ ಪವರ್ ಪಕ್ಷವಲ್ಲ, ಸಮ ಸಮಾಜದ ಪಕ್ಷ: ಚೇತನ್ ಅಹಿಂಸಾ

ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ...

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...

ಪಾಂಡವಪುರ | ಮೇಲುಕೋಟೆ ಕ್ಷೇತ್ರದ ಬಳಗಟ್ಟ ಪಂಚಾಯಿತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೊಸ ಹೆಜ್ಜೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಸಮಗ್ರ ಹಾಗೂ ಸುಸ್ಥಿರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ...

ಸೆ.17ಕ್ಕೆ ಮದ್ದೂರು ತಾಲೂಕು ಸಾಹಿತ್ಯ ಸಮ್ಮೇಳನ ನಿಗದಿ: ಏಕಪಕ್ಷೀಯವಾಗಿರದೆ ಎಲ್ಲರನ್ನೂ ಒಳಗೊಳ್ಳುವಂತೆ ಕರವೇ ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಸೆಪ್ಟಂಬರ್‌ 17ರಂದು ಹತ್ತನೇ ತಾಲೂಕು ಸಾಹಿತ್ಯ...