ಮಂಡ್ಯ | ಧ್ವಜ ವಿವಾದದ ಹಿನ್ನೆಲೆ; ಶಾಂತಿ ಕಾಪಾಡಲು ತಹಶೀಲ್ದಾರ್‌ಗೆ ಮನವಿ

Date:

Advertisements

ಈಕೆ ಆರ್‌ ಪೇಟೆ ಟಿಬಿ ವೃತ್ತದಲ್ಲಿ ಕೆಲವು ದಿನಗಳ ಹಿಂದೆ ನೀಲಿ ಧ್ವಜವನ್ನು ತೆರವುಗೊಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಇರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಹಶೀಲ್ದಾರ್ ನಿಸರ್ಗಪ್ರಿಯ ಅವರಿಗೆ ಮನವಿ ಸಲ್ಲಿಸಿದರು.

ಕೆಆರ್‌ಪೇಟೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದ ಎದುರು ಯಾವುದೇ ಅನುಮತಿ ಇಲ್ಲದೆ ದೊಡ್ಡ ಕಂಬ ನೆಟ್ಟು ಸಂಘಪರಿವಾರದ ಧ್ವಜ ಹಾರಿಸಿರುವುದನ್ನು ತೆರವುಗೊಳಿಸಬೇಕು. ತಾಲೂಕಿನಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ವಿವಾದಿತ ಧ್ವಜವನ್ನು ಹಾರಿಸಲು ಅನುಮತಿ ನೀಡಬಾರದು ಹಾಗೂ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಅನುಮತಿ ಕೊಡಿ ಎಂದು ಒತ್ತಾಯಿಸಿದರು.

ಸಂಘ ಪರಿವಾರದವರು ಶಾಂತಿ ಸುವ್ಯವಸ್ಥೆಯನ್ನು ಕದಡುವ ಹುನ್ನಾರದ ಭಾಗವಾಗಿ ಧ್ವಜ ಹಾಗೂ ಕಳಸ ಪ್ರಕರಣವನ್ನು ಹುಟ್ಟು ಹಾಕಿ ವಿವಾದ ಮಾಡುತ್ತಿದ್ದಾರೆ. ಆದ್ದರಿಂದ ಇಂತಹ ಹುನ್ನಾರಗಳಿಗೆ ಅನುವು ಕೊಡದಂತೆ ತಾಲೂಕಿನಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು.

Advertisements

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸ್ತಿ ರಂಗಪ್ಪ , ಗಂಗಾಧರ್ , ಕಾರ್ತಿಕ್ , ಪುರಸಭಾ ಸದಸ್ಯರಾದ ಪ್ರೇಮ್ ಕುಮಾರ್, ಗಿರೀಶ್ , ದಸಂಸ ತಾಲೂಕು ಸಂಚಾಲಕ ರಂಗಸ್ವಾಮಿ, ಕತ್ತರಘಟ್ಟ ರಾಜೇಶ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮು , ತಾಲ್ಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜು, ಭೀಮಸೇನೆ ತಾಲ್ಲೂಕು ಅಧ್ಯಕ್ಷ ಗಣೇಶ್, ದಲಿತ ಸೇನೆ ಜಿಲ್ಲಾಧ್ಯಕ್ಷ ನಾಟನಹಳ್ಳಿ ಮಂಜು, ಹರಿಹರಪುರ ನರಸಿಂಹ, ಮುದುಗೆರೆ ಮಹೇಂದ್ರ ಹಾಗೂ ಇತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮ, ತಾಲೂಕು ಕೇಂದ್ರದಿಂದ ಕೇವಲ...

Download Eedina App Android / iOS

X