ಮಂಡ್ಯ | ‘ವಧು ಭಾಗ್ಯʼಕ್ಕೆ ಒತ್ತಾಯ; ಆದಿಚುಂಚನಗಿರಿಗೆ ಯುವಕರ ಪಾದಯಾತ್ರೆ

Date:

ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಮಂಡ್ಯದ ಯುವಕರು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು ಮದುವೆಯ ಕನಸು ಕಾಣುವುದನ್ನು ನಿಲ್ಲಿಸಿದ್ದಾರೆ. ಅದೆಷ್ಟೋ ಯುವಕರು ವಧು ಸಿಗದೆ ಜಿಗುಪ್ಸೆಗೆ ಒಳಗಾಗುತ್ತಿದ್ದಾರೆ. ಯುವ ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲವೆಂದು ಪೋಷಕರು ನೇರವಾಗಿ ಹೇಳುತ್ತಿದ್ದಾರೆ.

ಕೊರೊನಾ ನಂತರ ಯುವಕರು ಖಾಸಗಿ ಉದ್ಯೋಗ ತೊರೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಇವರಿಗೆ ಯಾವ ಪೋಷಕರು ಕನ್ಯೆ ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯದ 30ವರ್ಷ ಮೇಲ್ಪಟ್ಟ ಯುವಕರು ಡಿಸೆಂಬರ್‌ನಲ್ಲಿ, ಅದೃಷ್ಟದ ಬದಲಾವಣೆಗೆ ಮತ್ತು ಅವರ ಸಂಕಟದ ಬಗ್ಗೆ ಜಾಗೃತಿ ಮೂಡಿಸಲು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರ್ಷ ನಡೆಯುತ್ತಿರುವ ಎರಡನೇ ಪಾದಯಾತ್ರೆ ಇದಾಗಿದೆ. ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕು ಎಂದು ಮಂಡ್ಯದ ಯುವಕರು ಒತ್ತಾಯಿಸುತ್ತಿದ್ದಾರೆ.

ಇದೇನು ಮೊದಲ ಪಾದಯಾತ್ರೆಯಲ್ಲ ಈ ಹಿಂದೆ ಫೆಬ್ರವರಿಯಲ್ಲಿ ಯುವ ಕೃಷಿಕರು ಕನ್ಯೆ ಸಿಗುತ್ತಿಲ್ಲವೆಂದು ಮಳವಳ್ಳಿ ತಾಲೂಕಿನಿಂದ ಚಾಮರಾಜನಗರ ಜಿಲ್ಲೆಯ ಎಂ.ಎಂ.ಹಿಲ್ಸ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....