ಶ್ರೀರಂಗಪಟ್ಟಣ | ಐಕ್ಯ ಅಲಯನ್ಸ್ ವತಿಯಿಂದ ಗಾಂಧಿ ಹುತಾತ್ಮ ದಿನಾಚರಣೆ

Date:

ಐಕ್ಯ ಅಲಯನ್ಸ್ ಸಂಸ್ಥೆಯ ವತಿಯಿಂದ ಹುತಾತ್ಮ ದಿನವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ನದಿ ತಟದಲ್ಲಿರುವ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಬಿಟ್ಟ ಸ್ಥಳದ ಸ್ಮಾರಕದಲ್ಲಿ ಪುಷ್ಪಾರ್ಚನೆ ಮೂಲಕ ಭಾವಪೂರ್ಣವಾಗಿ ಆಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಐಕ್ಯ ಅಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಎನ್. ಸರಸ್ವತಿ, “ನನ್ನ ಜೀವನವೇ ನನ್ನ ಸಂದೇಶ” ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಪ್ರತಿಮ ನಾಣ್ಣುಡಿಯಾಗಿದ್ದು, ಅವರು ಬೋಧಿಸಿದ್ದಕ್ಕಿಂತ ಹೆಚ್ಚು ಬದುಕಿ ತೋರಿಸಿದ ಮಹಾನ್ ನಾಯಕರು ಎಂದರು. ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಾವಲಂಬನೆ ಗಾಂಧೀಜಿಯವರ ದಿನನಿತ್ಯದ ಬದುಕಿನ ಭಾಗವಾಗಿದ್ದು, ಅವು ಕೇವಲ ಮಾತುಗಳಲ್ಲದೆ ಆಚರಣೆಯಾಗಿ ರೂಪುಗೊಂಡಿದ್ದವು ಎಂದು ಹೇಳಿದರು. ಮಹಾತ್ಮ ಗಾಂಧೀಜಿಯವರ ದೈವೈಕ್ಯ ದಿನಗಳನ್ನು ಸ್ವಾತಂತ್ರ್ಯ ಹೋರಾಟದ ವೀರರ ತ್ಯಾಗವನ್ನು ಸ್ಮರಿಸಲು ಹಾಗೂ ಅವರ ಆದರ್ಶಗಳನ್ನು ಪಾಲಿಸಲು ಮೀಸಲಿಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶ್ರೀರಂಗಪಟ್ಟಣ ಪುರಸಭೆಯ ಮಾಜಿ ಸದಸ್ಯ ನಳಿನ ಅವರು ಮಾತನಾಡಿ, “ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಪಶ್ಚಿಮ ವಾಹಿನಿ ನದಿಯಲ್ಲಿ ಬಿಟ್ಟು ಸ್ಮರಣಾರ್ಥವಾಗಿ ಸ್ಥಾಪಿಸಿರುವ ಸ್ಮಾರಕವು ಸೂಕ್ತ ನಿರ್ವಹಣೆಯಿಲ್ಲದೆ ನೆನೆಗುಂದಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಗುರುತಿಸಿ, ಭೇಟಿಗರಿಗೆ ಸುವ್ಯವಸ್ಥಿತ ತಾಣವನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಪಟ್ಟಣದ ಪುರಸಭೆ ವಹಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ​ಮಂಡ್ಯ | ಯುವಜನರ ಭಾವನೆಗಳ ಜತೆಗಿನ ರಾಜಕೀಯ ಚೆಲ್ಲಾಟ ನಿಲ್ಲಿಸಿ: ಸಿಪಿಐಎಂ

ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ವೇದಿಕೆಯ ಅಧ್ಯಕ್ಷ ಸಿ.ಎಸ್. ವೆಂಕಟೇಶ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಜಯಶಂಕರ್, ಐಕ್ಯ ಅಲಯನ್ಸ್ ಸಂಸ್ಥೆಯ ಖಜಾಂಚಿ ಗಾಯತ್ರಿ, ಸದಸ್ಯರಾದ ಲಕ್ಷ್ಮೀದೇವಿ, ಪ್ರಿನ್ಸ್ ಅಧ್ಯಕ್ಷ ಪುಟ್ಟಸ್ವಾಮಿ, ಶಿಕ್ಷಕಿ ಎಚ್.ಜೆ. ಶೀಲಾ, ಶಿವಕುಮಾರ್, ಬಾಲು, ಸಿ. ನಾರಾಯಣ, ಚಿಕ್ಕತಮೇಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀರಂಗಪಟ್ಟಣ | ಇದು ಸ್ಟಾರ್ ಪವರ್ ಪಕ್ಷವಲ್ಲ, ಸಮ ಸಮಾಜದ ಪಕ್ಷ: ಚೇತನ್ ಅಹಿಂಸಾ

ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ...

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...

ಪಾಂಡವಪುರ | ಮೇಲುಕೋಟೆ ಕ್ಷೇತ್ರದ ಬಳಗಟ್ಟ ಪಂಚಾಯಿತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೊಸ ಹೆಜ್ಜೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಸಮಗ್ರ ಹಾಗೂ ಸುಸ್ಥಿರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ...

ಸೆ.17ಕ್ಕೆ ಮದ್ದೂರು ತಾಲೂಕು ಸಾಹಿತ್ಯ ಸಮ್ಮೇಳನ ನಿಗದಿ: ಏಕಪಕ್ಷೀಯವಾಗಿರದೆ ಎಲ್ಲರನ್ನೂ ಒಳಗೊಳ್ಳುವಂತೆ ಕರವೇ ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಸೆಪ್ಟಂಬರ್‌ 17ರಂದು ಹತ್ತನೇ ತಾಲೂಕು ಸಾಹಿತ್ಯ...