ಶ್ರೀರಂಗಪಟ್ಟಣ | ಜ್ಞಾನ ವಿಶ್ವವಿದ್ಯಾನಿಲಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪದ್ಮಶ್ರೀ ಎಂ. ಅಂಕೇಗೌಡ

Date:

“ಪ್ರಪಂಚದ ಎಲ್ಲಾ ಜ್ಞಾನವನ್ನು ಒಂದೇ ಸೂರಿನಡಿ ತರುವ ತವಕ ನನ್ನದು. ಅರ್ಧ ಶತಮಾನದ ಪರಿಶ್ರಮದಿಂದ ಜ್ಞಾನ ಹಂಚುವ ಪುಸ್ತಕ ಮನೆ ಸ್ಥಾಪನೆಗಾಗಿ 2026ರ ಅನ್ಸಂಗ್ ಹೀರೋಸ್ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ದೊರೆತಿದೆ” ಎಂದು ಪದ್ಮಶ್ರೀ ಪುರಸ್ಕೃತ ಎಂ. ಅಂಕೇಗೌಡ ಅಭಿಪ್ರಾಯಪಟ್ಟರು.

- Advertisement -

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣದಲ್ಲಿ ಸಂಜಯ ಪ್ರಕಾಶನ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಾವಿರ ವರ್ಷಗಳ ಹಿಂದೆ ನಳಂದ ವಿಶ್ವವಿದ್ಯಾನಿಲಯದಲ್ಲಿದ್ದ ಧರ್ಮಗಂಜ್ ಎಂಬ ಮೂರು ಅಂತಸ್ತಿನ ಗ್ರಂಥಾಲಯದಲ್ಲಿ ಜಗತ್ತಿನ ಮೂಲೆಮೂಲೆಗಳಿಂದ ಸಂಗ್ರಹಿಸಿದ್ದ ಹಸ್ತಪ್ರತಿಗಳು ಬೆಂಕಿಗೆ ಆಹುತಿಯಾಗಿದ್ದವು. ಅದೇ ಮಾದರಿಯ ಜ್ಞಾನ ಭಂಡಾರವನ್ನು ಪುನರ್‌ನಿರ್ಮಿಸುವ ಕನಸು ಹೊಂದಿದ್ದು, ಹರಳಹಳ್ಳಿ ಗ್ರಾಮದ ‘ಪುಸ್ತಕದ ಮನೆ’ಯನ್ನು ಜ್ಞಾನ ದೀಪವಾಗಿ ಹಾಗೂ ಜ್ಞಾನ ವಿಶ್ವವಿದ್ಯಾನಿಲಯದ ಮಾದರಿಯಾಗಿ ಬೆಳೆಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

“ಇದು ಕೇವಲ ಇಟ್ಟಿಗೆ-ಸಿಮೆಂಟ್ ಕಟ್ಟಡವಾಗಿರಬಾರದು. ಜ್ಞಾನದ ವಿಶ್ವವಿದ್ಯಾನಿಲಯವಾಗಿ ರೂಪುಗೊಳ್ಳಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯ” ಎಂದು ಅವರು ಹೇಳಿದರು.

ಹಿರಿಯ ಗಾಂಧಿವಾದಿ ಡಾ. ಬಿ. ಸುಜಯ್ ಕುಮಾರ್ ಮಾತನಾಡಿ, ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿಯೊಬ್ಬರು 20 ಲಕ್ಷಕ್ಕೂ ಹೆಚ್ಚು ವಸ್ತುಗಳನ್ನು ಸಂಗ್ರಹಿಸಿರುವುದು ಅಪರೂಪದ ಸಾಧನೆ. ಪ್ರಶಸ್ತಿಗಿಂತಲೂ ಅವರು ನಿರ್ಮಿಸಿರುವ ‘ಪುಸ್ತಕದ ಮನೆ’ ಸಮಾಜಕ್ಕೆ ನೀಡಿರುವ ಅಮೂಲ್ಯ ಕೊಡುಗೆ ಎಂದರು.

ಮಹಾತ್ಮ ಗಾಂಧಿಯವರ ‘ನಿಜವಾದ ಶಿಕ್ಷಣ ಎಂದರೆ ಹೃದಯ ಮತ್ತು ಮನಸ್ಸನ್ನು ಒಟ್ಟಿಗೆ ಕಟ್ಟುವುದು’ ಎಂಬ ವಿಚಾರಕ್ಕೆ ಜೀವಂತ ರೂಪ ನೀಡಿರುವ ವ್ಯಕ್ತಿಯನ್ನು ಸನ್ಮಾನಿಸುತ್ತಿರುವುದು ಮಂಡ್ಯ ಜಿಲ್ಲೆಯ ಹೆಮ್ಮೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂಜಯ ಪ್ರಕಾಶನದ ವತಿಯಿಂದ ಪದ್ಮಶ್ರೀ ಪುರಸ್ಕೃತ ಎಂ. ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ; ಮತದಾರರ ಹಕ್ಕು ರಕ್ಷಣೆಗೆ ಕರೆ

ಕಾರ್ಯಕ್ರಮದಲ್ಲಿ ಸಂಜಯ ಪ್ರಕಾಶನದ ಸಂಸ್ಥಾಪಕ ಎಸ್.ಎಂ. ಶಿವಕುಮಾರ್, ಯುವ ಬರಹಗಾರ ಬಳಗದ ಸಂಸ್ಥಾಪಕ ಸತೀಶ್ ಜವರೇಗೌಡ, ಮಹಿಳಾ ಸಾಂತ್ವನ ಸಂಸ್ಥಾಪಕಿ ಶೀಲಾ ನಂಜುಂಡಯ್ಯ, ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಜಯಶಂಕರ್, ಮುಸ್ಲಿಂ ಸೌಹಾರ್ದ ವೇದಿಕೆ ಖಜಾಂಚಿ ಆಯುಬ್, ಶ್ರೀರಂಗನಾಯಕಿ ಸ್ತ್ರೀ ಸಮಾಜದ ಸುಮಂಗಲ, ಸುಧಾ, ಶಿಕ್ಷಕಿ ಎಚ್.ಜೆ. ಶೀಲಾ, ಕನ್ನಡ ಪ್ರಾಧ್ಯಾಪಕ ಶಿವಕುಮಾರ್ ಕಾರೆಪುರ, ಡಾ. ಬಿ.ಕೆ. ರಾಮು, ಪ್ರಾಧ್ಯಾಪಕ ಬ್ಯಾಡರಹಳ್ಳಿ ಧನಂಜಯ್, ಸಾಹಿತಿ ಕ್ಯಾತನಹಳ್ಳಿ ಚಂದ್ರಣ್ಣ, ಪತ್ರಕರ್ತ ಗಣಂಗೂರು ನಂಜೇಗೌಡ, ವಕೀಲ ಎಸ್.ಆರ್. ಸಿದ್ದೇಶ್, ಚಿಕ್ಕತಮ್ಮೆಗೌಡ, ಸದಾನಂದ, ಸುರೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವ ಹುಲಿ ದಿನ: ಭಾರತದ ಇತಿಹಾಸದಲ್ಲಿ ಹುಲಿ ಏಕೆ ಇಷ್ಟು ವಿಶೇಷ?

ಪ್ರತಿ ವರ್ಷ ಜುಲೈ 29ರಂದು ಇಡೀ ಜಗತ್ತು ವಿಶ್ವ ಹುಲಿ ದಿನವನ್ನು...

‘ಕನಸಿನ ನಗರ ಶ್ರೀರಂಗಪಟ್ಟಣ’ದ ಬಗ್ಗೆ ವಿಜ್ಞಾನಿ ಅಬ್ದುಲ್ ಕಲಾಂ ಏನು ಹೇಳಿದ್ದರು? ಇಲ್ಲಿದೆ ಓದಿ….

ಡಾ. ಅಬ್ದುಲ್ ಕಲಾಂ ಅವರಿಗೆ ಶ್ರೀರಂಗಪಟ್ಟಣ ಎಂದರೆ ಕೇವಲ ಟಿಪ್ಪುವಿನ ರಾಜಧಾನಿಯಾಗಿರಲಿಲ್ಲ....

ಜು.15ರಂದು ರಾಷ್ಟ್ರೀಯ ಪ್ಲ್ಯಾಸ್ಟಿಕ್ ಸರ್ಜರಿ ದಿನ: ಟಿಪ್ಪು ಕಾಲದಲ್ಲೇ ನಡೆದಿತ್ತು ‘ಇಂಡಿಯನ್ ರೈನೋಪ್ಲ್ಯಾಸ್ಟಿ’

ಪ್ಲ್ಯಾಸ್ಟಿಕ್ ಸರ್ಜರಿ ʼಇಂದಿನ ಆಧುನಿಕ ವಿಜ್ಞಾನʼ ಅಲ್ಲ; ಭಾರತದಲ್ಲಿ ಸಹಸ್ರಾರು ವರ್ಷಗಳಿಂದಲೂ...

ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ-ಇತಿಹಾಸವನ್ನು ಹೊಗಳುವುದಲ್ಲ, ಅರ್ಥ ಮಾಡಿಕೊಳ್ಳುವುದು ಮುಖ್ಯ: ಮ್ಯಾನ್ ಮನು

ಅಮೆರಿಕದ 250ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಸಂಜಯ...