ಮಂಗಳೂರು | ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ ಆರೋಪ; ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Date:

  • ಸಿಪಿಐ(ಎಂ) ಮುಖಂಡ ಶೇಖರ ಪ್ರತಿಭಟನೆ
  • 5ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.

ಮಾಧ್ಯಮದವರ ಜೊತೆ ಶೇಖರ ಲಾಯಿಲ ಮಾತನಾಡಿ, “ಬೆಳ್ತಂಗಡಿ ತಾಲೂಕಿನಲ್ಲಿ ಕೇವಲ 5 ಜನರಿಗೆ ಮಾತ್ರ ನದಿಯಿಂದ ಮರಳು ತೆಗೆಯಲು ಪರವಾನಿಗೆ ನೀಡಲಾಗಿದೆ. ಆದರೆ, ತಾಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಹಲವಾರು ಜನರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಮರಳುಗಾರಿಕೆಯು ತಾಲೂಕಿನಾದ್ಯಂತ ಕೋಟ್ಯಾಂತರ ರೂಪಾಯಿ ವ್ಯವಹಾರವಾಗಿ ಬೆಳೆದಿದೆ. ತಾಲೂಕಿನಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಪ್ರವಾಹದ ಬಳಿಕ ನಡೆಸಿದ ಕಾಮಗಾರಿಗಳು ಕಳಪೆಯಾಗಿ ನೀರುಪಾಲಾಗಿದೆ. ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ಕಳಪೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿಯೂ ಭಾರೀ ಅಕ್ರಮ ನಡೆದಿದೆ. ನಕಲಿ ಕಂಪನಿಗಳಿಗೆ ಗುತ್ತಿಗೆ ನೀಡಿದೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನು ಧರಣಿ ಕುಳಿತು 5 ದಿನ ಕಳೆದರೂ ಕೂಡ ತಾಲೂಕು ಹಾಗೂ ಜಿಲ್ಲಾಡಳಿತ, ಬೆಳ್ತಂಗಡಿ ತಹಶೀಲ್ದಾರ್, ಪೊಲೀಸ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಯಾರೊಬ್ಬರೂ ಇತ್ತ ಸುಳಿದಿಲ್ಲ. ಇದನ್ನು ಗಮನಿಸಿದರೆ, ಮರಳು ದಂಧೆಕೋರರ ಜೊತೆ ಇವರೆಲ್ಲರೂ ನೇರ ಶಾಮಿಲಾಗಿದ್ದಾರೆ ಎಂಬುದು ಖಾತ್ರಿಯಾಗುತ್ತದೆ” ಎಂದು ಆರೋಪಿಸಿದರು.

“ಈ ಎಲ್ಲ ವಿಚಾರಗಳ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಇದರ ಬಗ್ಗೆ ಸ್ಪಷ್ಟ ಭರವಸೆ ಸಿಗುವವರೆಗೆ ನನ್ನ ಪ್ರತಿಭಟನೆ ಮುಂದುವರೆಯಲಿದ್ದು, ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಮುಂದುವರಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...