ಮಂಗಳೂರು | ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ ಆರೋಪ; ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Date:

  • ಸಿಪಿಐ(ಎಂ) ಮುಖಂಡ ಶೇಖರ ಪ್ರತಿಭಟನೆ
  • 5ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.

ಮಾಧ್ಯಮದವರ ಜೊತೆ ಶೇಖರ ಲಾಯಿಲ ಮಾತನಾಡಿ, “ಬೆಳ್ತಂಗಡಿ ತಾಲೂಕಿನಲ್ಲಿ ಕೇವಲ 5 ಜನರಿಗೆ ಮಾತ್ರ ನದಿಯಿಂದ ಮರಳು ತೆಗೆಯಲು ಪರವಾನಿಗೆ ನೀಡಲಾಗಿದೆ. ಆದರೆ, ತಾಲೂಕಿನ ಎಲ್ಲ ನದಿಗಳಲ್ಲಿ, ತೊರೆಗಳಲ್ಲಿ ಹಲವಾರು ಜನರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಮರಳುಗಾರಿಕೆಯು ತಾಲೂಕಿನಾದ್ಯಂತ ಕೋಟ್ಯಾಂತರ ರೂಪಾಯಿ ವ್ಯವಹಾರವಾಗಿ ಬೆಳೆದಿದೆ. ತಾಲೂಕಿನಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಪ್ರವಾಹದ ಬಳಿಕ ನಡೆಸಿದ ಕಾಮಗಾರಿಗಳು ಕಳಪೆಯಾಗಿ ನೀರುಪಾಲಾಗಿದೆ. ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ಕಳಪೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿಯೂ ಭಾರೀ ಅಕ್ರಮ ನಡೆದಿದೆ. ನಕಲಿ ಕಂಪನಿಗಳಿಗೆ ಗುತ್ತಿಗೆ ನೀಡಿದೆ” ಎಂದು ಆರೋಪಿಸಿದರು.

“ನಾನು ಧರಣಿ ಕುಳಿತು 5 ದಿನ ಕಳೆದರೂ ಕೂಡ ತಾಲೂಕು ಹಾಗೂ ಜಿಲ್ಲಾಡಳಿತ, ಬೆಳ್ತಂಗಡಿ ತಹಶೀಲ್ದಾರ್, ಪೊಲೀಸ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಯಾರೊಬ್ಬರೂ ಇತ್ತ ಸುಳಿದಿಲ್ಲ. ಇದನ್ನು ಗಮನಿಸಿದರೆ, ಮರಳು ದಂಧೆಕೋರರ ಜೊತೆ ಇವರೆಲ್ಲರೂ ನೇರ ಶಾಮಿಲಾಗಿದ್ದಾರೆ ಎಂಬುದು ಖಾತ್ರಿಯಾಗುತ್ತದೆ” ಎಂದು ಆರೋಪಿಸಿದರು.

“ಈ ಎಲ್ಲ ವಿಚಾರಗಳ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಇದರ ಬಗ್ಗೆ ಸ್ಪಷ್ಟ ಭರವಸೆ ಸಿಗುವವರೆಗೆ ನನ್ನ ಪ್ರತಿಭಟನೆ ಮುಂದುವರೆಯಲಿದ್ದು, ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಮುಂದುವರಿಸಲಾಗುವುದು” ಎಂದು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...

ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ...