ಮಂಗಳೂರು | ಜಿಲ್ಲಾ ಕಾರಾಗೃಹದ ಸುಮಾರು 45 ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥ

Date:

Advertisements

ಮಂಗಳೂರು ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಸುಮಾರು 45 ಮಂದಿ ವಿಚಾರಣಾಧೀನ ಖೈದಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಬುಧವಾರ ಮಧ್ಯಾಹ್ನ ಊಟದ ಬಳಿಕ ಖೈದಿಗಳು ಹೊಟ್ಟೆನೋವು, ವಾಂತಿ ಭೇದಿಯಿಂದ ಬಳಲಿದ್ದಾರೆ. ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಖೈದಿಗಳಿಗೆ ಅವಲಕ್ಕಿ, ಅನ್ನ ಸಾಂಬಾರು ನೀಡಲಾಗಿದ್ದು, ಕಲುಷಿತ ಆಹಾರದಿಂದ ಅಸ್ವಸ್ಥಗೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೃಷ್ಣೆಯ ತಟದಲ್ಲಿ ಅಕ್ರಮ ಮರಳು ಸಾಗಾಟ; ಕ್ರಮಕ್ಕೆ ಒತ್ತಾಯ

Advertisements

“ಪ್ರಾಥಮಿಕ ಮಾಹಿತಿಯ ಪ್ರಕಾರ ಅಸ್ವಸ್ಥಗೊಂಡಿರುವವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರ ಆರೋಗ್ಯ ಸ್ಥಿರವಾಗಿದೆ. ಕಾರಾಗೃಹಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ನೀರು, ಆಹಾರದ ಮಾದರಿಯ ಪರೀಕ್ಷೆ ನಡೆಸಿದ್ದಾರೆ. ಕಾರಾಗೃಹದಲ್ಲಿ ಸುಮಾರು 350 ಮಂದಿ ವಿಚಾರಣಾಧೀನ ಖೈದಿಗಳಿದ್ದಾರೆ. ಸಂಜೆಯವರೆಗೆ ಸುಮಾರು 45 ಮಂದಿ ಅಸ್ವಸ್ಥಗೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X