ಮಂಗಳೂರು | ಬ್ಯಾರಿ ಭಾಷೆ, ಸಾಹಿತ್ಯ ತಳಸ್ಪರ್ಶಿ ಅಧ್ಯಯನ ಅಗತ್ಯ: ಡಾ. ಅಬೂಬಕರ್ ಸಿದ್ದೀಕ್

Date:

Advertisements

ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಿಸಿದಂತೆ ನಡೆಯುವ ಅಧ್ಯಯನವು ತಳಸ್ಪರ್ಶಿಯಾಗಬೇಕು. ಆವಾಗ ಮಾತ್ರ ಬ್ಯಾರಿ ಭಾಷೆ ಜನ ಮಾನಸದಲ್ಲಿ ಆಳವಾಗಿ ಬೇರೂರಲು  ಸಾಧ್ಯ ಎಂದು ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಹೇಳಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ಮಂಗಳೂರು ವಿ.ವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ (ಮಾ.1) ನಡೆದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ʼಬ್ಯಾರಿ: ನಾನು ಕಂಡಂತೆʼ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಬ್ಯಾರಿ ಭಾಷೆಯಲ್ಲಿ ಸಾಹಿತ್ಯದ ಅನೇಕ ಪ್ರಕಾರಗಳು ಬಂದಿವೆ. ಆದರೆ, ತಳಸ್ಪರ್ಶಿ ಅಧ್ಯಯನದ ಕೊರತೆ ಕಾಡುತ್ತಿವೆ. ಈ ನಿಟ್ಟಿನಲ್ಲಿ ಅಧ್ಯಯನ ಪೀಠವು ಕ್ಷೇತ್ರ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಅಬೂಬಕ್ಕರ್ ಸಿದ್ದೀಕ್ ಅವರು ಹೇಳಿದರು.

Advertisements

ಆಲಿಯಬ್ಬ ಜೋಕಟ್ಟೆಯವರ ಈ ಅನುಭವ ಕಥನವು ಸಂಶೋಧನಾಸಕ್ತ ವಿದ್ಯಾರ್ಥಿಗಳಿಗೆ ಆಕರ ಕೃತಿಯಾಗಲಿ ಎಂದು ಡಾ. ಅಬೂಬಕ್ಕರ್ ಸಿದ್ದೀಕ್ ಆಶಿಸಿದರು.

ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯಿಲ್ ಎನ್. ಉದ್ಘಾಟಿಸಿದರು. ಕೃತಿಕಾರ ಆಲಿಯಬ್ಬ ಜೋಕಟ್ಟೆ ಕೃತಿ ರಚನೆಗೆ ಸಂಬಂಧಿಸಿದಂತೆ ತನ್ನ ಅನುಭವ ಹಂಚಿಕೊಂಡರು. ಪತ್ರಕರ್ತ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಅಧ್ಯಕ್ಷ ಖಾಲಿದ್ ಉಜಿರೆ, ʼಮೇಲ್ತೆನೆʼಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಆರ್. ಮನೋಹರ ಕಾಮತ್ ಮಾತನಾಡಿದರು.

ಅಧ್ಯಯನ ಪೀಠದ ಸದಸ್ಯರಾದ ಸಮೀರಾ ಕೆ.ಎ. ಸ್ವಾಗತಿಸಿದರು. ಖಾಲಿದ್ ತಣ್ಣೀರುಬಾವಿ ವಂದಿಸಿದರು. ಶಹಲಾ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X