ಮಂಗಳೂರು | ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲೂರು ಟ್ರಸ್ಟ್‌ನಿಂದ ರಕ್ತದಾನ ಶಿಬಿರ

Date:

Advertisements

ರಾಜಕೀಯ ರಹಿತವಾಗಿ ಆರೋಗ್ಯಪೂರ್ಣ ಕಾರ್ಯಕ್ರಮಗಳನ್ನು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನಿಸುಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಠದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಬೇಕು ಎಂದು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದರು.

ಅವರು ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಕಾರವಾರ ಇದರ ಆಶ್ರಯದಲ್ಲಿ ಯೂತ್ ರೆಡ್ ಕ್ರಾಸ್ , ಎನ್ ಎಸ್ ಎಸ್ ರೇಂಜರ್ಸ್- ರೋರ‍್ಸ್ ಘಟಕ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಮಂಗಳೂರಿನ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರಗಿದ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ರಕ್ತದ ಕೊರತೆಯಾಗುತ್ತಿದೆ ಅನ್ನುವ ಕೂಗು ಇದೆ. ಅದನ್ನು ಹೋಗಲಾಡಿಸುವ ಸಲುವಾಗಿ ಕಲ್ಲೂರು ಟ್ರಸ್ಟ್ ನಿರಂತರವಾಗಿ ವಿವಿಧ ಸಂಘಟನೆಗಳ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಿದೆ ಎಂದರು.

Advertisements
ರಕ್ತದಾನ

ಸಾಹಿತಿ ನಾಗೇಶ್ ಕಲ್ಲೂರು ಮಾತನಾಡಿ, “ಧರ್ಮಗಳ ಭೇದವಿಲ್ಲದ ಊರು ಕಲ್ಲೂರು. ಸಮಾಜದ ಮುಂಚೂಣಿಗೆ ಬರಲು ಹಿರಿಯ ಪುತ್ತಬ್ಬ ಬ್ಯಾರಿ ಸದಾ ಬೆನ್ನು ತಟ್ಟುತ್ತಿದ್ದರೆ, ಅವರ ಪತ್ನಿ ಎಲ್ಲ ಸಂದರ್ಭದಲ್ಲಿಯೂ ಊರವರ ಕಷ್ಟಕ್ಕೆ ಸ್ಪಂದಿಸಿದವರು. ಅಂತಹ ದಂಪತಿಯ ಪುತ್ರನಾಗಿರುವ ಇಬ್ರಾಹಿಂ ಕಲ್ಲೂರು ಕೂಡಾ ಅವರು ತೋರಿಸಿದ ದಾರಿಯಲ್ಲೇ ಮುನ್ನಡೆಯುತ್ತಿರುವುದು ಸಾಮಾಜಿಕ ಮೌಲ್ಯಗಳಿಗೆ ಸಿಕ್ಕಂತಹ ಸಂಪತ್ತು. ಕಳೆದ 30 ವರ್ಷಗಳಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ. ಕಲಬೆರಕೆ ಆಹಾರಗಳಿಂದ ಆರೋಗ್ಯದಲ್ಲಿ ಸಮಸ್ಯೆ, ಕಾಯಿಲೆಗಳ ಸಂಖ್ಯೆ, ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿದೆ. ಸಂಸ್ಕರಿತ, ಸಿಹಿ ರೂಪ ಸಕ್ಕರೆಯುಳ್ಳ ಆಹಾರಗಳನ್ನು ಕಡಿಮೆ ಮಾಡಿ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ರಕ್ತವನ್ನು ಶುದ್ಧವಾಗಿರಿಸುವ ಮೂಲಕ ಇತರರಿಗೆ ದಾನ ನೀಡುವಂತಾಗಿರಿ” ಎಂದರು.

ರಕ್ತದಾನ1

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ದ.ಕ ಜಿಲ್ಲಾ ಗೃಹ ರಕ್ಷಕದಳ ಕಮಾಂಡೆಂಟ್ ಡಾ. ಮುರಳಿ ಮೋಹನ್ ಚೂಂತಾರು ಮಾತನಾಡಿ, “ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಕೊಡಲಾಗುತ್ತದೆ. ರಿಪ್ಲೇಸ್ ಮೆಂಟ್‌ಗಳನ್ನೂ ಕೇಳುವುದಿಲ್ಲ. ಇಂಡಿಯನ್ ರೆಡ್ ಕ್ರಾಸ್ ನಡೆಸುವ 12 ಬ್ಲಡ್ ಬ್ಯಾಂಕ್ ಗಳಿವೆ. ಪ್ರತಿದಿನ 8-15,000 ಲೀ. ರಕ್ತದ ಅವಶ್ಯಕತೆಯಿದೆ. ದೇಶದಲ್ಲಿ 1.44 ಕೋಟಿ ರಕ್ತದಾನಿಗಳು ಬೇಕಾಗಿದ್ದಾರೆ. ರಕ್ತಕ್ಕೆ ಹಣ ಸುಲೀತಾರೆ ಅನ್ನುವುದು ತಪ್ಪು ಮಾಹಿತಿ. ಇನ್ನೊಬ್ಬರ ಜೀವ ಉಳಿಸಲು ವೈದ್ಯನಾಗಬೇಕೆಂದಿಲ್ಲ. ಮಾನವೀಯ ಗುಣವುಳ್ಳ ಮನುಷ್ಯನಾದರೆ ಸಾಧ್ಯ. ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಗಾಗಿ ಎನ್ ಎಸ್ ಎಸ್ ಮತ್ತು ರೆಡ್ ಕ್ರಾಸ್‌ನ ಜೊತೆಗೆ ಕೈಜೋಡಿಸಿ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಮಾತನಾಡಿ, “ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಸೇರಿದಂತೆ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬರುತ್ತಿದ್ದಾರೆ. ರಕ್ತದಾನದ ಶ್ರೇಷ್ಠತೆಯನ್ನು ಅರಿತ ವಿದ್ಯಾರ್ಥಿಗಳು ಇತರರಿಗೂ ರಕ್ತದಾನ ನಡೆಸುವಂತೆ ಪ್ರೇರಣೆ ನೀಡಬೇಕು” ಎಂದರು.

ರಕ್ತದಾನ3

ಮಂಗಳೂರು ವಿ.ವಿ ಮಾಜಿ ಕುಲಸಚಿವ ಡಾ. ಎ.ಎಂ.ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆರೋಗ್ಯ ಶಿಬಿರ ಸಂಚಾಲಕರಾದ ಅಝೀಝ್ ಕಲ್ಲೂರು, ಕಲ್ಲೂರು ಟ್ರಸ್ಟ್ ನ ಉಮ್ಮರ್ ಕುಂಞಿ ಸಾಲೆತ್ತೂರು, ಸಂದೀಪ್ ರೇವಣ್ಕರ್ ಕಾರವಾರ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸಾಧಕರಾದ ಸತೀಶ್ ಗಟ್ಟಿ, ಮುರುಳಿ ಮೋಹನ್ ಚೂಂತಾರು, ಹೈದರ್ ಅಲಿ, ನಾಗೇಶ್ ಕಲ್ಲೂರು, ಉಮ್ಮರ್ ಕುಂಞಿ ಸಾಲೆತ್ತೂರು, ನಾಗೇಶ್ ಕಲ್ಲೂರು, ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಉಡುಪಿ | ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

ಯೂತ್ ರೆಡ್ ಕ್ರಾಸ್ ಸಂಚಾಲಕ ಪ್ರೊ. ಹೈದರ್ ಆಲಿ ಸ್ವಾಗತಿಸಿದರು. ರೇಂಜರ್ ಘಟಕ ಸಂಚಾಲಕರು ಅಕ್ಷತಾ ಸುವರ್ಣ ರಕ್ತದಾನಿಗಳ ವಿವರ ನೀಡಿದರು.

ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶೋಭಾಮಣಿ ವಂದಿಸಿದರು. ವಿದ್ಯಾರ್ಥಿನಿ ಮರಿಯಂ ಸಫೀದ ನಿರೂಪಿಸಿದರು. ಶಿಬಿರದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿ ಒಟ್ಟು 60 ಮಂದಿ ರಕ್ತದಾನ ಮಾಡಿದರು.

ರಕ್ತದಾನ4
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X