ಮಂಗಳೂರು | ಮಂದಿರದ ಬಳಿ ಬಿಜೆಪಿಯಿಂದ ಪ್ರಚಾರ: ಆಕ್ಷೇಪ ಎತ್ತಿದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜಟಾಪಟಿ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಭಾಗದ ದೇವಸ್ಥಾನವೊಂದರ ಬಳಿ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿದ ಘಟನೆ ಇಂದು(ಗುರುವಾರ) ನಡೆದಿದೆ.

ನಗರದ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ನಡೆದ ಘಟನೆ ನಡೆದಿದ್ದು, ದೇವಸ್ಥಾನದ ಬಳಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಬಿಜೆಪಿ ಕಾರ್ಯಕರ್ತರ ತಂಡವು ಪ್ರಚಾರ ನಡೆಸುತ್ತಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ಎತ್ತಿದ್ದಾರೆ. ಪ್ರಚಾರದ ವಿಚಾರವಾಗಿ ಆರಂಭವಾದ ವಾಗ್ವಾದವು, ಹೊಯ್ ಕೈ ನಡೆಸುವ ಹಂತಕ್ಕೆ ತಲುಪಿತು. ವಿಷಯ ತಿಳಿದ ಕೂಡಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ಮುಖಂಡರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ವಾಗ್ವಾದವು ವಿಪರೀತಕ್ಕೆ ತಲುಪುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಪೊಲೀಸರು, ಸ್ಥಳದಲ್ಲಿದ್ದವರನ್ನು ಸಮಾಧಾನ ಪಡಿಸಿದರು ಎಂದು ತಿಳಿದುಬಂದಿದೆ.

ರಾಮನವಮಿಯ ಹಿನ್ನೆಲೆಯಲ್ಲಿ ಚಿಲಿಂಬಿಯ ಸಾಯಿ ಮಂದಿರದ ಬಳಿ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು. ಈ ವೇಳೆ ಬಿಜೆಪಿಗರು ಇಲ್ಲೇ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದರು. ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ, ಮಾತಿನ ಚಕಮಕಿ, ಹೊಯ್‌ಕೈ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಸದ್ಯ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿರುವುದಾಗಿ ವರದಿಯಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X