ಮಂಗಳೂರು | ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳ ಕ್ರೀಡಾಕೂಟದ ಸಂಭ್ರಮ

Date:

Advertisements

ಮಂಗಳೂರು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶನಿವಾರ (ಮಾ.2) ನಡೆದ ಕ್ರೀಡಾಕೂಟ ಮಾಮೂಲಿ ಕ್ರೀಡಾಕೂಟಕ್ಕಿಂತ ಭಿನ್ನವಾಗಿತ್ತು. ಇಲ್ಲಿ ಭಾಗವಹಿಸಿದವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಸಿಬ್ಬಂದಿ.

ಗ್ರಾಮ ಸ್ವರಾಜ್ ಪ್ರತಿಷ್ಠಾನದ ವತಿಯಿಂದ ಸ್ಥಳೀಯ ಪಂಚಾಯತ್, ನಗರಾಡಳಿತ ಸದಸ್ಯರಿಗಾಗಿ ಹಾಗೂ ಸಿಬ್ಬಂದಿಗಾಗಿ ಆಯೋಜಿಸಲಾದ ಹೊಂಬೆಳಕು ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ,  ನಗರ ಪಾಲಿಕೆಯ ಸದಸ್ಯರು ಪಕ್ಷ ಭೇದ ಮರೆತು ಕ್ರೀಡಾ ಕೂಟದಲ್ಲಿ ಭಾಗಿಯಾದರು. ವಿಧಾನ ಪರಿಷತ್ ಸದಸ್ಯ ಹಾಗೂ ಗ್ರಾಮ ಸ್ವಾರಾಜ್ ಪ್ರತಿಷ್ಠಾನದ ಅಧ್ಯಕ್ಷ  ಡಾ.ಮಂಜುನಾಥ್ ಭಂಡಾರಿ ಅವರ ನೇತೃತ್ವದಲ್ಲಿ ಈ ಹೊಂಬೆಳಕು ಕ್ರೀಡಾಕೂಟ ನಡೆಯಿತು.

Advertisements

ವಾಲಿಬಾಲ್, ತ್ರೋಬಾಲ್, ತೆಂಗಿನಕಾಯಿ ಎಸೆತ, ಗೋಣಿಚೀಲ ಓಟ, ಹಗ್ಗ ಜಗ್ಗಾಟ, ಸೇರಿದಂತೆ ವಿವಿಧ ಆಟ, ಮನರಂಜನಾ ಆಟಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿರಿಯ ಪಂಚಾಯತ್ ಸದಸ್ಯರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಪ್ರತ್ಯೇಕ ಸಾಂಸ್ಕೃತಿಕ ವೇದಿಕೆಯ ಮೂಲಕ ನಿರಂತರ ಸಾಂಸ್ಕೃತಿಕ ಮನರಂಜನೆಯನ್ನು ಉಣಬಡಿಸಲಾಯಿತು. ವಿವಿಧ ಸ್ಥರಗಳ ಪಂಚಾಯತ್ ಪ್ರತಿನಿಧಿಗಳಿಗೆ ಪರಸ್ಪರ ಪರಿಚಯ, ಒಡನಾಟ ಮೂಡಿಸಲು ಈ ಕ್ರೀಡಾಕೂಟ ಸಹಕಾರಿಯಾಯಿತು ಎಂದು ಭಾಗಿಯಾಗಿದ್ದವರು ಹರ್ಷ ವ್ಯಕ್ತಪಡಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆಲ್ಲ ಅಚ್ಚುಕಟ್ಟಾದ  ಊಟೋಪಚಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಎರಡೂ ಜಿಲ್ಲೆಗಳಿಂದ ನಾಲ್ಕು ಸಾವಿರದಷ್ಟು ಮಂದಿ ಕ್ರೀಡಾಕೂಟದಲ್ಲಿ ಭಾಗಿಯಾದರು. ಬಿಸಿಲಿನ ಬೇಗೆಯಲ್ಲೂ ಸ್ಪರ್ಧಾಳುಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X