ಮಂಗಳೂರು | ಸ್ಥಳ ಮಹಜರಿನ ವೇಳೆ ಪೊಲೀಸರ ಮೇಲೆ ‘ಚಡ್ಡಿ ಗ್ಯಾಂಗ್’ ದಾಳಿ; ಕಾಲಿಗೆ ಗುಂಡೇಟು!

Date:

Advertisements

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಮಂಗಳವಾರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ‘ಚಡ್ಡಿ ಗ್ಯಾಂಗ್’ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದರು.

ಆರೋಪಿಗಳನ್ನು ಸಕಲೇಶಪುರದಿಂದ ಮಂಗಳೂರಿಗೆ ಮಂಗಳವಾರ ಸಂಜೆ ಕರೆತರಲಾಗಿತ್ತು. ಬುಧವಾರ ಬೆಳಗ್ಗೆ ದರೋಡೆ ನಡೆಸಿದ ಬಳಿಕ ಮುಲ್ಕಿಯಲ್ಲಿ ಕಾರು ಬಿಟ್ಟು ಹೋಗಿದ್ದ ಸ್ಥಳದ ಮಹಜರು ಮಾಡಲು ಹೋದ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ.

ಚಡ್ಡಿ ಗ್ಯಾಂಗ್ 1 1

ಈ ವೇಳೆ ಪೊಲೀಸರಿಗೆ ಗಾಯವಾಗಿದ್ದು, ಆರೋಪಿಗಳ ಮೇಲೆ ಪೊಲಿಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಗುಂಡೇಟಿನಿಂದ ಇಬ್ಬರು ಆರೋಪಿಗಳ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Advertisements

ಪಡುಪಣಂಬೂರು ಬಳಿ ಘಟನೆ ನಡೆದಿರುವುದಾಗಿ ಮಾಹಿತಿ ಲಭಿಸಿದೆ. ದರೋಡೆ ಪ್ರಕರಣ ಹಾಗೂ ಪರಾರಿಯಾಗಲು ಯತ್ನಿಸಿದ ಬಗೆಗಿನ ಎಲ್ಲ ವಿವರಗಳನ್ನು ನೀಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬುಧವಾರ ಬೆಳಗ್ಗೆ 11.30ಕ್ಕೆ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದಾರೆ.

ಏನಿದು ಪ್ರಕರಣ?

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು, ಹಾಸನ ಪೊಲೀಸರ ನೆರವಿನಿಂದ ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ದರೋಡೆಗೈದು ಬಸ್ಸಿನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗುತ್ತಿದ್ದ ತಂಡವನ್ನು ಕೆಎಸ್‌ಆರ್‌ಟಿಸಿಯ ಬಸ್ ಚಾಲಕ ಹಾಗೂ ಕಂಡಕ್ಟರ್ ನೀಡಿದ ಮಾಹಿತಿಯ ಮೇರೆಗೆ ಸಕಲೇಶಪುರದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಬಂಧಿತರೆಲ್ಲರೂ ಮಧ್ಯಪ್ರದೇಶದ ಮೂಲದವರಾಗಿದ್ದು, ರಾಜು ಸಿಂಗ್ವಾನಿಯ (24 ವರ್ಷ), ಮಯೂರ್ (30 ವರ್ಷ), ಬಾಲಿ (22 ವರ್ಷ), ವಿಕ್ಕಿ (21 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: ದರೋಡೆ ನಡೆಸಿ ಪರಾರಿಯಾಗುತ್ತಿದ್ದ ‘ಚಡ್ಡಿ ಗ್ಯಾಂಗ್’ ಬಂಧನ

ಈ ಚೆಡ್ಡಿ ಗ್ಯಾಂಗ್‌, ಮಂಗಳವಾರ ಮುಂಜಾನೆ 3.30ರ ಅವಧಿಯಲ್ಲಿ ಉರ್ವ ಕೊಟ್ಟಾರದ ಬಳಿ ವೃದ್ಧ ದಂಪತಿ ವಾಸವಿರುವ ಮನೆಯೊಂದಕ್ಕೆ ಪ್ರವೇಶಿಸಿ, ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದರು. ಆ ಬಳಿಕ ಮನೆಯಲ್ಲಿದ್ದ ಕಾರಿನ ಕೀಯನ್ನು ಪಡೆದುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಮುಲ್ಕಿ ಸಮೀಪ ಕಾರನ್ನು ತೊರೆದು, ಮತ್ತೆ ಮಂಗಳೂರು ಕಡೆಗೆ ಬಂದ ಬಸ್‌ನಲ್ಲಿ ಹತ್ತಿದ್ದರು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಉಡುಪಿ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ದರೋಡೆಗೈದಿದ್ದ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಪೊಲೀಸರಿಗೆ ಕಂಡು ಬಂದಿತ್ತು.

ಆ ಬಳಿಕ ಮಂಗಳೂರಿನಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದ ತಂಡವನ್ನು ಸಕಲೇಶಪುರ ಪೊಲೀಸರ ನೆರವಿನಿಂದ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X