ಮಂಗಳೂರು | ಬೆಂಗ್ರೆ ಭಾಗಕ್ಕೆ ಬಸ್ ಸೇವೆ ಕಲ್ಪಿಸಲು CPIM ಸಮಿತಿಯಿಂದ KSRTCಗೆ ಮನವಿ

Date:

Advertisements

ಮಂಗಳೂರಿನ ಬೆಂಗ್ರೆ ಪ್ರದೇಶಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಪ್ರಾರಂಭಿಸಲು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ CPIM ಬೆಂಗ್ರೆ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ದ.ಕ.ಜಿಲ್ಲೆಯ ಕಸಬಾ ಬೆಂಗ್ರೆ ಪ್ರದೇಶ ನದಿ ಮತ್ತು ಸಮುದ್ರದ ಮಧ್ಯೆ ಇರುವ ಪ್ರದೇಶವಾಗಿದ್ದು, ಇಲ್ಲಿನ ಜನರು ನಗರ ಪ್ರದೇಶಕ್ಕೆ ತಲುಪಲು ಜಾಸ್ತಿಯಾಗಿ ಫೆರಿಬೋಟ್ ಗಳನ್ನೇ ಅವಲಂಬಿಸಬೇಕಾಗುತ್ತದೆ. ಇನ್ನೊಂದು ಭಾಗದಲ್ಲಿ ರಸ್ತೆಯ ಮುಖಾಂತರ ಕುಳೂರು ಪ್ರದೇಶದವರೆಗೆ ನೇರ ರಸ್ತೆಯಿದ್ದು ಮಂಗಳೂರು ನಗರ ಪ್ರದೇಶಗಳಿಗೆ ಹಾಗೆಯೇ ರಾಷ್ಟ್ರೀಯ ಹೆದ್ದಾರಿಗೂ ತಲುಪಬಹುದಾಗಿದೆ. ಸದ್ಯಕ್ಕೆ ಬೆಂಗ್ರೆಯಿಂದ ಬಜಪೆವರೆಗೆ ಕೇವಲ ಒಂದೇ ಖಾಸಗಿ ಬಸ್, ದಿನಕ್ಕೆರಡು ಬಾರಿ ಮಾತ್ರ ಸಂಚಾರ ಮಾಡುತ್ತದೆ. ಈ ಭಾಗದಿಂದ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಬೇರೆ ಬೇರೆ ವಲಯದ ದುಡಿಯುವ ಜನರಿಗೆ ಸಮಯಕ್ಕೆ ಸರಿಯಾದ ಸೂಕ್ತ ಬಸ್ ವ್ಯವಸ್ಥೆ ಇರುವುದಿಲ್ಲ. ಕೇವಲ ಒಂದು ಖಾಸಗಿ ಬಸ್ಸಿನ ನಿಗದಿತ ಸೇವೆ ಈ ಭಾಗಕ್ಕೆ ಸಾಕಾಗುವುದಿಲ್ಲ. ಹಾಗಾಗಿ ಸರ್ಕಾರಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಸಮಿತಿ ಸದಸ್ಯರು ಮನವಿ ಮಾಡಿದರು.

“ಈ ನಿಟ್ಟಿನಲ್ಲಿ ಪ್ರಸ್ತುತ ತೋಟ ಬೆಂಗ್ರೆಯಿಂದ ಕಸಬಾ ಬೆಂಗ್ರೆ ಮಾರ್ಗವಾಗಿ ತನ್ನೀರುಬಾವಿ, ಕುಳೂರು, ಕೊಟ್ಟಾರ, ಲಾಲ್ ಭಾಗ್ ಕೊಟ್ಟಾರ, ಕಾರ್ಪೊರೇಷನ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ರೈಲ್ವೆ ನಿಲ್ದಾಣ ಜಂಕ್ಷನ್ ವರೆಗೆ ಚಲಿಸಲು ಸರಕಾರಿ ಬಸ್ ವ್ಯವಸ್ಥೆ ಅಗತ್ಯವಿದೆ ಮತ್ತು ಈ ಭಾಗದಿಂದ ಬೇರೆ ಬೇರೆ ಪ್ರದೇಶಗಳಿಗೂ ಸಂಚರಿಸಲು ಸರಕಾರಿ ಬಸ್ ಅಗತ್ಯವಿದೆ. ವಿಶೇಷವಾಗಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸರಕಾರದ ಉಚಿತ ಪ್ರಯಾಣದ ಸೌಲಭ್ಯ ದೊರೆಯಬೇಕು” ಎಂದು CPIM ಬೆಂಗ್ರೆ ನಿಯೋಗ ಆಗ್ರಹಿಸಿದೆ.

ಇದನ್ನೂ ಓದಿ: ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ನಿಯೋಗದಲ್ಲಿ CPIM ಮಂಗಳೂರು ದಕ್ಷಿಣ ನಗರ ಸಮಿತಿ ಸದಸ್ಯ ತೈಯೂಬ್ ಬೆಂಗ್ರೆ, CPIM ಬೆಂಗ್ರೆ ಕಾರ್ಯದರ್ಶಿ ನಾಸಿರ್ ಬಾಸ್, ಬಿಲಾಲ್ ಬೆಂಗ್ರೆ, ಮುಖಂಡರಾದ ಹನೀಫ್ ಬೆಂಗ್ರೆ, ಮುಹಾಝ್, ರಿಝ್ವಾನ್ ಹಾಗೂ ಫಝುಲ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X