ಮಂಗಳೂರು | ಹಜ್ಜ್‌ ಯಾತ್ರಿಕರ ಅನುಕೂಲಕ್ಕಾಗಿ ಜಿಲ್ಲಾ ಮಾಹಿತಿ ಕೇಂದ್ರ ಆರಂಭ

Date:

Advertisements

ದ.ಕ.ಜಿಲ್ಲೆಯಿಂದ ತೆರಳಲಿರುವ ಹಜ್ಜ್‌ ಯಾತ್ರಿಗಳ ಅನುಕೂಲಕ್ಕಾಗಿ ಮತ್ತು ಮಾಹಿತಿ ಒದಗಿಸುವ ಉದ್ದೇಶದಿಂದ‌ ಜಿಲ್ಲಾ ಮಾಹಿತಿ ಕೇಂದ್ರ ಮಂಗಳೂರು ಹಜ್ಜ್‌ ಕಚೇರಿಯು ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್‌ನಲ್ಲಿ ಆರಂಭಗೊಂಡಿದೆ. ಹಜ್ ಯಾತ್ರಿಕರಿಗೆ ಗರಿಷ್ಠ ಪ್ರಮಾಣದಲ್ಲಿ ನೆರವಾಗಲು ರಾಜ್ಯ ಹಜ್ಜ್‌ ಸಮಿತಿ ಪ್ರಯತ್ನಿಸಲಿದೆ ಎಂದು ಕರ್ನಾಟಕ ರಾಜ್ಯ ಹಜ್ ಸಮಿತಿಯ ಸದಸ್ಯ ಸಯ್ಯಿದ್ ಅಶ್ರಫ್ ಅಸ್ಸಖಾಫ್ ತಂಙಳ್ ಆದೂರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾತ್ರಿಗಳು ಸಲ್ಲಿಸಿದ ದಾಖಲೆ ಪತ್ರಗಳನ್ನು ಮುಡಿಪುವಿನ ಮಾಹಿತಿ ಕೇಂದ್ರಕ್ಕೆ ತಂದುಕೊಟ್ಟರೆ, ಅದನ್ನು ರಾಜ್ಯ ಹಜ್ಜ್‌ ಸಮಿತಿಗೆ ತಲುಪಿಸಲಾಗುವುದು. ಆರೋಗ್ಯ ತಪಾಸಣೆ ಹಾಗೂ ತರಬೇತಿಯನ್ನು ಆಯೋಜಿಸಲಾಗುವುದು. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741770138 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಈ ಬಾರಿ ರಾಜ್ಯದಿಂದ ಹಜ್ಜ್‌ ಯಾತ್ರೆಗೆ 8697 ಮಂದಿ ಆಯ್ಕೆಯಾಗಿದ್ದು, ದ.ಕ ಜಿಲ್ಲೆಯ 1,078, ಉಡುಪಿಯ 116, ಕೊಡಗು ಜಿಲ್ಲೆಯ 101 ಮಂದಿ ಇದ್ದಾರೆ. ಜಿಲ್ಲೆಯ 251, ಉಡುಪಿಯ 22 ಹಾಗೂ ಕೊಡಗು ಜಿಲ್ಲೆಯ 25 ಸೇರಿದಂತೆ ರಾಜ್ಯದ 2,310 ಮಂದಿ ವೆಯ್ಟಿಂಗ್ ಲಿಸ್ಟ್‌ನಲ್ಲಿದ್ದಾರೆ ಎಂದರು.

Advertisements

ಮಂಗಳೂರಿನಲ್ಲಿ ಹಜ್ಜ್‌ ಭವನ ನಿರ್ಮಿಸಲು ಸರ್ಕಾರ ಹಲವು ವರ್ಷಗಳ ಹಿಂದೆಯೇ ಅನುದಾನ ಮಂಜೂರು ಮಾಡಿದ್ದರೂ ನಿವೇಶನ ಅಂತಿಮಗೊಳಿಸುವುದು ವಿಳಂಬವಾಗಿತ್ತು. ಇದೀಗ ಉದ್ದೇಶಿತ ನಿವೇಶನಕ್ಕೆ ಸಂಬಂಧಿಸಿದ ಸಮಸ್ಯೆ ಇತ್ಯರ್ಥಗೊಂಡಿದ್ದು, ಶೀಘ್ರದಲ್ಲೇ ಹಜ್ ಭವನ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದರು.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ರಾಜ್ಯ ಹಜ್ ಸಮಿತಿ ಮಾಜಿ ಸದಸ್ಯ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಶೀರ್ ಮುಡಿಪು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X