ಮಂಗಳೂರು | ತುಳುನಾಡಿನ ಪಾರಂಪರಿಕ ಕೈಮಗ್ಗ ವೃತ್ತಿಯನ್ನು ಪ್ರೋತ್ಸಾಹಿಸಿ: ಅಮರಶ್ರೀ

Date:

ತುಳುನಾಡಿನ ಪಾರಂಪರಿಕ ಕೈ ಮಗ್ಗ ವೃತ್ತಿಗೆ ತುಳುನಾಡಿನ ಜನತೆ ಎಲ್ಲಾ ರೀತಿಯ ಸಹಕಾರ ಬೆಂಬಲ ಕೊಡಬೇಕು ಎಂದು ಎ ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಹೇಳಿದರು.

- Advertisement -

ಮಂಗಳೂರಿನ ಕಿನ್ನಿಗೋಳಿ ನೇಕಾರ ಸೌಧದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಕದಿಕೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಕೈ ಮಗ್ಗ ನೇಯ್ಗೆಯ ಹಿರಿಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಗೌರವ ಸಮರ್ಪಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ರಾಜ್ಯದ ಹಾಗೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಬೆಳೆದು ಬಂದ ನೇಯ್ಗೆ ವೃತ್ತಿಯ ಬಗ್ಗೆ ನಾವೆಲ್ಲ ಅಭಿಮಾನ ಪಟ್ಟುಕೊಳ್ಳುತ್ತೇವೆ. ಇದೇ ಸಂದರ್ಭದಲ್ಲಿ ನಮ್ಮದೇ ನೆಲದಲ್ಲಿ ಹುಟ್ಟಿ ಬೆಳೆದ ಒಂದು ಕಾಲದಲ್ಲಿ ಕುಲ ಕಸುಬಾಗಿದ್ದ, ಕೈ ಮಗ್ಗ ನೇಯ್ಗೆಯವರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ವರ್ಷದಲ್ಲಿ ಒಂದು ಬಾರಿಯಾದರೂ ತುಳುನಾಡಿನ ಸೀರೆ ಹಾಗೂ ಕೈ ಮಗ್ಗದ ಉತ್ಪನ್ನಗಳನ್ನು ಖರೀದಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಕೈ ಮಗ್ಗ ನೇಯ್ಗೆಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್, “ತಾಳಿಪಾಡಿ ನೇಕಾರರ ಸೇವಾ ಸಂಘ ಹಾಗೂ ಕದಿಕೆ ಟ್ರಸ್ಟ್ ಅವರ ಕಾರಣದಿಂದಾಗಿ ನಾನು ಮತ್ತೇ ನನ್ನ ಮೂಲ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು. ನನಗೆ ಸಿಕ್ಕಿದ ಗೌರವವು ಈ ಎರಡೂ ಸಂಸ್ಥೆಗಳಿಗೆ ಅರ್ಪಿಸುತ್ತೇನೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳು ಬದುಕಿನ ವಿಶಾಲವಾದ ವ್ಯಾಪ್ತಿಯೊಳಗಡೆ ಅನೇಕ ಕುಲಕಸುಬು ಹಾಗೂ ಕುಶಲಕರ್ಮಿಗಳ ಸೇವೆ ತುಳುನಾಡಿಗೆ ಸಂದಿವೆ. ಈ ಹಿನ್ನಲೆ ಕೈ ಮಗ್ಗ ನೇಯ್ಗೆಯಲ್ಲಿ ತೊಡಗಿಸಿಕೊಂಡ ಹಿರಿಯರನ್ನು ಪ್ರೋತ್ಸಾಹಿಸುವ ಸಲುವಾಗಿ  ಅಕಾಡೆಮಿ ವತಿಯಿಂದ ಚಾವಡಿ ತಮ್ಮನದ ಗೌರವ ನೀಡಲಾಯಿತು” ಎಂದರು.

ಇದನ್ನೂ ಓದಿ: ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

ಕದಿಕೆ ಟ್ರಸ್ಟ್ ನ ಅಧ್ಯಕ್ಷೆ ಮಮತಾ ರೈ ಮಾತನಾಡಿ, “2018 ರಲ್ಲಿ ಕದಿಕೆ ಟ್ರಸ್ಟ್ ವತಿಯಿಂದ ಪಾರಂಪರಿಕ ಕೈ ಮಗ್ಗವನ್ನು ಪುನರುಜ್ಜೀವನಗೊಳಿಸುವ  ಕೆಲಸ ಮಾಡಿಕೊಂಡು ಬರಲಾಯಿತು. ಇಂದು ದೇವಕಿ ಶೆಟ್ಟಿಗಾರ್ ಅವರಂತೆ ಹಿರಿಯರು ಈ ವೃತ್ತಿಯಲ್ಲಿ ಮತ್ತೆ ತೊಡಗಿಸಿಕೊಳ್ಳಲು ಹಾಗೂ ಹೊಸಬರು ಈ ವೃತ್ತಿಗೆ ಬರುವಂತೆ ಪ್ರೇರೇಪಿಸಲು  ಸಾಧ್ಯವಾಗಿದೆ. ಕೈ ಮಗ್ಗ ಬಟ್ಟೆಗಳನ್ನು ಖರೀದಿಸುವ ಮೂಲಕ ಇವರನ್ನು ನಾವು ಪ್ರೋತ್ಸಾಹಿಸಬೇಕು” ಎಂದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಪ್ರಭಾಕರ ನೀರ್ ಮಾರ್ಗ, ಕೊಡೆತ್ತೂರು ಸಚ್ಚಿದಾನಂದ ಉಡುಪ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...