ಮಂಗಳೂರು | ಅಪಘಾತದಿಂದ ಪಾರು; ಚಾಲಕನ ವಿರುದ್ಧ ಪ್ರಕರಣ; ಪಾದಚಾರಿ ಮಹಿಳೆಗೂ ದಂಡ!

Date:

Advertisements
  • ಮಂಗಳೂರಿನ ತೌಡುಗೋಳಿ ಕ್ರಾಸ್‌ನಲ್ಲಿ ನಡೆದಿದ್ದ ಘಟನೆ,
  • ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದ ಟ್ರಾಫಿಕ್‌ ಪೊಲೀಸರು

ಮಹಿಳೆಯೋರ್ವರನ್ನು ಅಪಘಾತದಿಂದ ಪಾರು ಮಾಡಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬಳಿಕ ಮಂಗಳೂರು ಪೊಲೀಸರು, ಇದೀಗ ಪವಾಡ ಸದೃಶವಾಗಿ ಪಾರಾಗಿದ್ದ ಪಾದಚಾರಿ ಮಹಿಳೆಗೂ ದಂಡ ವಿಧಿಸಿರುವ ಅಪರೂಪದ ಘಟನೆ ನಡೆದಿದೆ.

ಮಂಗಳೂರು ತಾಲೂಕಿನ ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದರು. ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆ ಮೆರೆದಿದ್ದರಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದರು.

ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಎಲ್ಲ ಕಡೆ ವೈರಲ್ ಆಗಿತ್ತು. ಅಲ್ಲದೇ, ಹಲವು ಮಾಧ್ಯಮಗಳಲ್ಲಿ ಸುದ್ದಿ ಕೂಡ ಪ್ರಕಟವಾಗಿತ್ತು. ಬಳಿಕ ಈ ವಿಡಿಯೋ ಪೊಲೀಸರಿಗೆ ಸಾಕ್ಷಿಯಾಗಿ ದೊರೆತ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕರ್ಕಶ ಹಾರ್ನ್, ಅತಿವೇಗ, ಅಜಾಗರೂಕತೆ ಚಾಲನೆಯ ಕೇಸ್‌ ಜಡಿದಿದ್ದಲ್ಲದೆ, ಬಸ್ಸನ್ನು ವಶಕ್ಕೆ ಪಡೆದು ನಂತರ ಬಿಟ್ಟು ಕಳಿಸಿದ್ದರು.

Advertisements

ಆ ಬಳಿಕ ಈಗ ಮಹಿಳೆಗೂ ದಂಡ ವಿಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಾಹನವನ್ನು ಗಮನಿಸದೆ ಮಹಿಳೆ ರಸ್ತೆ ದಾಟಿದ್ದಾರೆ. ರಸ್ತೆ ದಾಟುವಾಗ ನಿರ್ಲಕ್ಷ್ಯ ತೋರಿದ್ದ ಹಿನ್ನೆಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಕಾಯ್ದೆಯ ಸೆಕ್ಷನ್ 13 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ 92ಜಿ ಅಡಿಯಲ್ಲಿ ಪಾದಚಾರಿ ಮಹಿಳೆಗೂ ದಂಡವಾಗಿ 100 ರೂಪಾಯಿ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X