ಮಂಗಳೂರು | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಅವಘಡ; 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟ

Date:

Advertisements

rದಲ್ಲಿ ಕಾರ್ಯಾಚರಿಸುತ್ತಿದ್ದ ಮೀನು ರಫ್ತು ಘಟಕದ ಕಂಪನಿಯಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿರುವುದಾಗಿ ತಿಳಿದುಬಂದಿದೆ.

ಸುರತ್ಕಲ್‌ನ ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ ಕಂಪನಿಯಲ್ಲಿ ಈ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಕಂಪನಿಯ ಕೋಲ್ಡ್ ಸ್ಟೋರೇಜ್ ಘಟಕ ಮತ್ತು ಕಟ್ಟಿಂಗ್ ವಿಭಾಗದಲ್ಲಿ ಭಾನುವಾರ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Advertisements

ಕಂಪನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಸಿಬ್ಬಂದಿಗಳು ಯಾರೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬೆಂಕಿ ಅವಘಡ ಘಟನೆಯಿಂದಾಗಿ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಬೆಂಕಿ ಅವಘಡದ ವಿಷಯ ತಿಳಿಯುತ್ತಿದ್ದಂತೆಯೇ ಕೈಗಾರಿಕಾ ವಲಯದಲ್ಲಿರುವ ಎಂಆರ್‌ಪಿಎಲ್, ಗೇಲ್ ಇಂಡಿಯಾ ಕಂಪನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಯ ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X