ಮಂಗಳೂರು | ಅನಧಿಕೃತ ಕ್ಲಿನಿಕ್, ಲ್ಯಾಬ್‍ಗಳ ಮೇಲೆ ದಾಳಿ ನಡೆಸಿ ಬೀಗ ಜಡಿದ ಆರೋಗ್ಯ ಇಲಾಖೆ ಅಧಿಕಾರಿಗಳು

Date:

Advertisements

ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್, ಲ್ಯಾಬ್‌ಗಳಿಗೆ ದಾಳಿ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017ರ ಅಡಿಯಲ್ಲಿ ಖಾಸಗಿ ಸಂಸ್ಥೆ, ಕ್ಲಿನಿಕ್‍ಗಳು, ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಲು ದಾಳಿ ನಡೆಸುತ್ತಿದ್ದಾರೆ.

ಮಂಗಳೂರು ತಾಲೂಕಿನ ಮೂಡುಶೆಡ್ಡೆ- ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

Advertisements

WhatsApp Image 2023 12 07 at 11.43.14 AM 1

ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಕ್ಲಿನಿಕ್ ಹಾಗೂ ಲ್ಯಾಬ್‌ಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.

ಈ ಅವಧಿಯೊಳಗೆ ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X