ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

Date:

Advertisements

2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.inನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಿ ಅಥವಾ ಡಯಟ್ ವ್ಯವಸ್ಥಾಪಕ ಕೇಂದ್ರವನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗಳಿಗೆ ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ

Advertisements

ಡಿಎಲ್‌ಇಡಿ ಕೋರ್ಸ್: ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 45% ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು.

ಡಿಪಿಇಡಿ ಕೋರ್ಸ್: ಡಿಪಿಇಡಿ ಕೋರ್ಸಿಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿಯುಸಿ/12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳನ್ನು ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ 45% ಅಂಕಗಳನ್ನು ಪಡೆದಿರಬೇಕು.

ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು‌, ಬ್ಯಾಂಕ್‍ಗೆ ನಿಗಧಿತ ಶುಲ್ಕ ಪಾವತಿಸಲು ಜೂನ್ 5 ಕೊನೆಯ ದಿನ.

ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooleducation.kar.nic.inನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿನ ಮಾಹಿತಿಗಳನ್ನು ಓದಿ, ಅರ್ಜಿ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ವ್ಯವಸ್ಥಾಪಕ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿಗೆ ನಿಗಧಿತ ಅಂತಿಮ ದಿನಾಂಕದ ಒಳಗೆ ಸಲ್ಲಿಸಬೇಕು.

ಇದ್ದನ್ನೂ ಓದಿದ್ದೀರಾ? ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‌: ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗೆ ಕೇಂದ್ರೀಕೃತ ದಾಖಲಾತಿ ಘಟಕದ ದೂರವಾಣಿ ಸಂಖ್ಯೆ:080-22483140 ಮತ್ತು 080-22483145 ಹಾಗೂ ಮಂಗಳೂರು ಕೊಡಿಯಾಲ್‍ಬೈಲು ಜೈಲ್‍ ರಸ್ತೆಯಲ್ಲಿರುವ -2493052, ಮೊಬೈಲ್: 8747857070) ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಹಾಗೂ ಪದನಿಮಿತ್ತ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X