ಮಂಗಳೂರು | ಜ. 9ರಂದು ಪತ್ರಕರ್ತ ಮೊಹಮ್ಮದ್‌ ಝುಬೇರ್‌ ನಗರಕ್ಕೆ

Date:

Advertisements

ರಾಜ್ಯಕ್ಕೆ ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ.ಕಾಮ್‌ ಡಿಜಿಟಲ್‌ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ʼನಮ್ಮ ಕರ್ನಾಟಕ–ನಡೆದ 50 ಹೆಜ್ಜೆ… ಮುಂದಿನ ದಿಕ್ಕುʼ ಎಂಬ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭಕ್ಕೆ ಪತ್ರಕರ್ತ ಮೊಹಮ್ಮದ್‌ ಝುಬೇರ್‌ ಆಗಮಿಸುತ್ತಿದ್ದಾರೆ.

ಮಂಗಳೂರು ನಗರದ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜು ಆವರಣದಲ್ಲಿರುವ ಬಿಷಪ್‌ ಜತ್ತನ್ನ ಸಭಾಂಗಣದಲ್ಲಿ ಜನವರಿ 9ರ ಗುರುವಾರ ಸಾಯಂಕಾಲ 4ಕ್ಕೆ ನಡೆಯಲಿರುವ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಸಮಾರಂಭದಲ್ಲಿ, ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಝುಬೇರ್‌ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ವಿಶೇಷ ಸಂಚಿಕೆ

ಕರ್ನಾಟಕ ಥಿಯೋಲಾಜಿಕಲ್‌ ಕಾಲೇಜಿನ ಪ್ರಾಶುಪಾಲ ರೆ. ಡಾ. ಎಚ್ ಎಂ ವಾಟ್ಸನ್‌ ಈದಿನ ನ್ಯೂಸ್‌ ಆ್ಯಪ್‌ ಬಿಡುಗಡೆ ಮಾಡಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

ಈದಿನ ಸಂಸ್ಥೆಯ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಹೆಚ್ ವಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ ದೇವದಾಸ್, ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್‌, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್‌ ಎಂ ಮತ್ತು ಡೀಡ್ಸ್‌ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X