ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕ ಮುರುಗನ್ ದುರ್ಮರಣ; ತುರ್ತು ಕ್ರಮಕ್ಕೆ CITU ಮನವಿ

Date:

ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ ಲೆಕ್ಕಾಚಾರದೊಂದಿಗೆ ನೋಡುವ ಪ್ರಚಲಿತ ವ್ಯವಸ್ಥೆಯ ಕಠೋರ ಪ್ರತಿಫಲವಾಗಿದೆ ಎಂದು ಹೇಳಿರುವ CITU ಕೇಂದ್ರ ಕಾರ್ಮಿಕ ಸಂಘಟನೆ ಇಂದು ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿತು.

- Advertisement -

ಧಕ್ಕೆಯಲ್ಲಿ ದುಡಿಯುವ ಕಾರ್ಮಿಕರು ವರ್ಷಗಳಿಂದ ಸುರಕ್ಷತಾ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದರೂ, ಉತ್ಪಾದನಾ ಪ್ರಕ್ರಿಯೆ ನಿರಂತರವಾಗಿರಬೇಕು ಎಂಬ ಒತ್ತಡ ಮಾತ್ರ ಉಳಿದು, ಕಾರ್ಮಿಕರ ಜೀವ ಮತ್ತು ಅವರ ಭದ್ರತೆ ಕಡೆಗಣಿಸಲ್ಪಟ್ಟಿದೆ. ಶ್ರಮದ ಮೇಲೆ ನಿಂತಿರುವ ಈ ಕ್ಷೇತ್ರದಲ್ಲಿ ಶ್ರಮಜೀವಿಗಳ ಜೀವಕ್ಕೆ ರಕ್ಷಣೆಯೇ ಇಲ್ಲದಿರುವುದು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ಸಾಮಾಜಿಕ ಅನ್ಯಾಯವೂ ಹೌದು.
ಮುರುಗನ್ ಅವರು ಮೀನು ಹೊತ್ತು ಬಂದು ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಕಂಬ ಕುಸಿದು ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿರುವುದು, ಕಾರ್ಮಿಕರ ದುಡಿಯುವ ಪರಿಸ್ಥಿತಿಗಳು ಎಷ್ಟು ಅಸುರಕ್ಷಿತವಾಗಿವೆ ಎಂಬುದಕ್ಕೆ ಮತ್ತೋಮದು ಸ್ಪಷ್ಟ ಉದಾಹರಣೆಯಾಗಿದೆ. ಉತ್ಪಾದನಾ ಸಾಧನಗಳು ಮತ್ತು ಮೂಲಸೌಕರ್ಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದಾಗ ಅದರ ಬೆಲೆಯನ್ನು ಕಾರ್ಮಿಕ ವರ್ಗ ತನ್ನ ಪ್ರಾಣವನ್ನು ಮುಡಿಪಾಗಿಡಬೇಕಾದಂತಹ ಪರಿಸ್ಥಿತಿ ಮತ್ತೆ ಮತ್ತೆ ಎದುರಾಗುತ್ತಿದೆ ಎಂಬುದು ಈ ದುರಂತದಿಂದ ಸ್ಪಷ್ಟವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಮನವಿಯಲ್ಲಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ

  1. ಮೃತ ಕಾರ್ಮಿಕ ಮುರುಗನ್ ಅವರ ಕುಟುಂಬಕ್ಕೆ ಕನಿಷ್ಠ ₹25 ಲಕ್ಷ ಪರಿಹಾರವನ್ನು ತಕ್ಷಣ ಮಂಜೂರು ಮಾಡಬೇಕು.
  2. ಮಂಗಳೂರು ಧಕ್ಕೆಯ ಸಮಗ್ರ ಸುರಕ್ಷತಾ ಮತ್ತು ಮೂಲಸೌಕರ್ಯ ಪರಿಶೀಲನೆ ನಡೆಸಿ, ಅಪಾಯಕಾರಿ ಲೈಟ್ ಕಂಬಗಳು ಸೇರಿದಂತೆ ಎಲ್ಲಾ ಹಳೆಯ ವ್ಯವಸ್ಥೆಯನ್ನು ತಕ್ಷಣ ಬದಲಾಯಿಸಬೇಕು.
  3. ಸಂಬಂಧಿತ ಇಲಾಖೆಯ ನಿರ್ಲಕ್ಷ್ಯಕ್ಕೆ ಹೊಣೆಗಾರರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
  4. ಧಕ್ಕೆಯಲ್ಲಿ ದುಡಿಯುವ ಎಲ್ಲಾ ಅಸಂಘಟಿತ ಕಾರ್ಮಿಕರ ಕಡ್ಡಾಯ ನೋಂದಣಿ, ವಿಮೆ, ಸುರಕ್ಷತಾ ಸಾಧನಗಳು ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಜಾರಿಗೆ ತರಬೇಕು.
  5. ಕಾರ್ಮಿಕ ಪ್ರತಿನಿಧಿಗಳನ್ನು ಒಳಗೊಂಡ ಸಂಯುಕ್ತ ಸುರಕ್ಷತಾ ಸಮಿತಿಯನ್ನು ರಚಿಸಿ, ನಿರಂತರ ಪರಿಶೀಲನಾ ವ್ಯವಸ್ಥೆಯನ್ನು ರೂಪಿಸಬೇಕು
  6. ಧಕ್ಕೆಯಲ್ಲಿ ದುಡಿಯುವ ಎಲ್ಲಾ ಅಸಂಘಟಿತ ಕಾರ್ಮಿಕರ ಕಡ್ಡಾಯ ನೋಂದಣಿ, ವಿಮೆ, ಸುರಕ್ಷತಾ ಸಾಧನಗಳು ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಜಾರಿಗೆ ತರಬೇಕು.
  7. ಕಾರ್ಮಿಕ ಪ್ರತಿನಿಧಿಗಳನ್ನು ಒಳಗೊಂಡ ಸಂಯುಕ್ತ ಸುರಕ್ಷತಾ ಸಮಿತಿಯನ್ನು ರಚಿಸಿ, ನಿರಂತರ ಪರಿಶೀಲನಾ ವ್ಯವಸ್ಥೆಯನ್ನು ರೂಪಿಸಬೇಕು.

ಇದನ್ನೂ ಓದಿ: ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕನ ದುರ್ಮರಣ, ಸಿಐಟಿಯು ತೀವ್ರ ಆಕ್ರೋಶ

ಕಾರ್ಮಿಕರ ಶ್ರಮವೇ ಆರ್ಥಿಕ ಚಟುವಟಿಕೆಗಳ ಅಸ್ತಿತ್ವ. ಆ ಶ್ರಮವನ್ನು ನಿರ್ಲಕ್ಷಿಸುವ ವ್ಯವಸ್ಥೆ ಮಾನವೀಯತೆಯನ್ನೇ ನಿರಾಕರಿಸುವಂತಾಗಿದೆ. ಇಂತಹ ದುರಂತಗಳು ಮತ್ತೆಂದೂ ಮರುಕಳಿಸದಂತೆ ತಕ್ಷಣ ದೃಢವಾದ ಕ್ರಮ ಕೈಗೊಳ್ಳುವುದು ಜಿಲ್ಲಾಡಳಿತದ ನೈತಿಕ ಹಾಗೂ ಕಾನೂನುಬದ್ಧ ಜವಾಬ್ದಾರಿಯಾಗಿರುವುದರಿಂದ ಶೀಘ್ರವಾಗಿ ಕಾನೂನು ಕ್ರಮ ಜರುಗಿಸಿ ಪರಿಹಾರ ಒದಗಿಸಬೇಕೆಂದು CITU ದ.ಕ.ಜಿಲ್ಲಾ ಸಮಿತಿಯು ಒತ್ತಾಯಿಸಿದೆ.

ನಿಯೋಗದಲ್ಲಿ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲಾ ಖಜಾಂಚಿ ಯೋಗೀಶ್ ಜಪ್ಪಿನಮೊಗರು,DYFI ಜಿಲ್ಲಾ ನಾಯಕರಾದ ತಯ್ಯುಬ್ ಬೆಂಗರೆ, ಪಿ ಜಿ ರಫೀಕ್ ರವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...