ಮಂಗಳೂರು | ಕೌಟುಂಬಿಕ ಕಲಹ: ಮಗುವಿನೊಂದಿಗೆ ನದಿಗೆ ಹಾರಲು ಯತ್ನಿಸಿದ ತಂದೆಯನ್ನು ರಕ್ಷಿಸಿದ ಮುಸ್ಲಿಮರು

Date:

Advertisements

ಪತ್ನಿಯ ವಿವಾಹೇತರ ಸಂಬಂಧಕ್ಕೆ ಬೇಸತ್ತ ಪತಿರಾಯನೊಬ್ಬ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ಸ್ಥಳೀಯ ಮುಸ್ಲಿಮರು ಮಗುವಿನ ಸಹಿತ ಇಬ್ಬರನ್ನೂ ರಕ್ಷಿಸಿದ ಘಟನೆ ರವಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಸೇತುವೆಯ ಬಳಿ ನಡೆದಿದೆ.

ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯರು ಕೆಳಗೆ ಹಾರಬೇಡ ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಆತ, ‘ಯಾರೂ ಹತ್ತಿರ ಬರಬೇಡಿ’ ಎಂದು ಕೂಗಿಕೊಂಡಿದ್ದಾನೆ.‌‌ ಇದೇ ವೇಳೆ ಆಯತಪ್ಪಿ ರಸ್ತೆಯ ಬದಿಗೆ ಬಿದ್ದಾಗಲೇ, ಓಡೋಡಿ ಬಂದ ಸ್ಥಳೀಯರು, ಕೊನೆಗೂ ಇಬ್ಬರನ್ನೂ ಹಿಡಿದು ಮಗುವಿನ ರಕ್ಷಣೆ ಮಾಡಿದ್ದಾರೆ.

Advertisements

“ಪತ್ನಿಯು ತನ್ನ ಕಣ್ಣೆದುರೇ ವಿವಾಹೇತರ ಸಂಬಂಧ ಹೊಂದಿದ್ದನ್ನು ನೋಡಿದ್ದೇನೆ. ಇದನ್ನು ಪ್ರಶ್ನಿಸಿದಾಗ ನನ್ನ ಮೇಲೆಯೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.‌ ಇದರಿಂದಾಗಿ ತುಂಬಾ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದೆ” ಎಂದು ಸ್ಥಳೀಯರು ರಕ್ಷಣೆ ಮಾಡಿದ ಬಳಿಕ ಸಂದೀಪ್ ಹೇಳಿಕೆಯನ್ನು ನೀಡಿದ್ದಾನೆ‌. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ ಎಂದು ಸದ್ಯ ತಿಳಿದು ಬಂದಿದೆ. ಸ್ಥಳೀಯರು ಬುದ್ದಿ ಮಾತು ಹೇಳಿ ಮನೆಗೆ ಕಳುಹಿಸಿದ್ದಾರೆ. ಘಟನೆಯ ದೃಶ್ಯಾವಳಿಗಳ ವಿಡಿಯೋ ಸೆರೆಯಾಗಿದೆ.

ನಿರಂತರ ಜಗಳ ನಡೆಯುತ್ತಿದ್ದ ಕಾರಣದಿಂದ ಸಂದೀಪ್ ವಿರುದ್ಧ ಪತ್ನಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಮಗು ಹಾಗೂ ತಂದೆಯನ್ನು ರಕ್ಷಿಸಿದ ಸ್ಥಳೀಯ ಮುಸ್ಲಿಮರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾಗಳಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X