ಮಂಗಳೂರಿನ ಹಿರಿಯ ಬರಹಗಾರರು ಭಾರತ್ ಸೋಷಿಯಲ್ ವೆಲ್ಫೇರ್ ಆಂಡ್ ಟ್ರಸ್ಟ್ ಅಧ್ಯಕ್ಷ ಎನ್ ಅಮೀನ್ ಪಕ್ಕಲಡ್ಕ ಅವರ ಮೊದಲ ಕಥಾ ಸಂಕಲನ “ಆನೆ ಬಂತೊಂದಾನೆ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಮಂಗಳೂರು ವಿಶ್ವವಿದ್ಯಾಲಯ ಕೊಣಾಜೆಯಲ್ಲಿ ನಡೆದ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನದಂದು ಕುಲಸಚಿವ ರಾಜು ಮೊಗವೀರ ಕೆಎಎಸ್ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ. ಪ್ರಭಾಕರ ಶಿಶಿಲ ಅವರು ನಿರ್ವಹಿಸಿದರು.

ಈ ಸುದ್ದಿ ಓದಿದ್ದೀರಾ? ಕತಾರ್ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್ನ ‘ಅಮ್ಮನ ತಮ್ಮನ’ ತಂಡ
ಕಸಾಪ ದ.ಕ ಜಿಲ್ಲಾ ಅಧ್ಯಕ್ಷ ಎಂ ಪಿ ಶ್ರೀನಾಥ್ ಮಂಗಳೂರು ಮಹಿಳಾ ಸಭಾ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ ಶೆಟ್ಟಿ, ಪ್ರಕಾಶಕ ಕೊಲ್ಲೂರು ನಾಗೇಶ್, ಉಳ್ಳಾಲ ತಾಲೂಕು ಅಧ್ಯಕ್ಷ ಪ್ರೊ. ಧನಂಜಯ ಕುಂಬ್ಳೆ, ಪ್ರೊ. ಮೋಹನ್ ಕುಂಟಾರ್, ಪ್ರೊ. ಸೋಮಣ್ಣ ಹೊಂಗಳ್ಳಿ, ಸ್ಮಿತಾ ಅಮೃತ ರಾಜ್ ಸಂಪಾಜೆ, ರೇಣುಕಾ ಸುಧೀರ್ ಅರಸಿನಮಕ್ಕಿ, ಪುಸ್ತಕ ಬಿಡುಗಡೆ ಸಮಿತಿಯ ಸಂಚಾಲಕ ಅಶೀರುದ್ದೀನ್ ಸಾರ್ತಬೈಲ್ ಸೇರಿದಂತೆ ಮೊದಲಾದವರು ಇದ್ದರು.
ಕಸಾಪ ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ ಕಾರ್ಯಕ್ರಮ ನಿರೂಪಿಸಿದರು.