ಮಂಗಳೂರು | ಅ.12ರಂದು ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ

Date:

Advertisements

ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ ಆಫ್ ಇಂಡಿಯಾ (ಎಸ್‌ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ‘ಬದಲಾವಣೆಯ ಚಿಂತನೆಯನ್ನು ಮರು ಪರಿಶೀಲಿಸೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಅ.12(ನಾಳೆ)ರ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ. ತಿಳಿಸಿದ್ದಾರೆ.

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮ್ಮೇಳನವು ಅ.12ರಂದು ಸಂಜೆ 4ಕ್ಕೆ ತೊಕ್ಕೊಟ್ಟು ಯೂನಿಟಿ ಹಾಲ್ ಬಳಿಯಲ್ಲಿರುವ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎಸ್‌ಐಓ

ಸಮಾವೇಶವನ್ನು ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಉಪಾಧ್ಯಕ್ಷ ವಿ.ಟಿ.ಅಬ್ದುಲ್ಲಾ ಕೋಯ ತಂಙಳ್ ಉದ್ಘಾಟಿಸಲಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಮೀಝ್ ಇ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಮುಮ್ತಾಝ್ ಅಲಿ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಸಭೆ

ಅತಿಥಿಗಳಾಗಿ ಕೆಪಿಸಿಸಿ ವಕ್ತಾರ, ಸಾಮಾಜಿಕ ಕಾರ್ಯಕರ್ತರಾದ ನಿಕೇತ್ ರಾಜ್ ಮೌರ್ಯ, ಎಸ್‌ಐಓ ಕರ್ನಾಟಕ ರಾಜ್ಯಾಧ್ಯಕ್ಷ ಝೀಶಾನ್‌ ಅಖಿಲ್ ಸಿದ್ದೀಕಿ, ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಮುಖಂಡರಾದ ಸಲೀಂ ಮಂಬಾಡ್, ಜಮಾಅತೆ ಇಸ್ಲಾಮೀ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮುಹಮ್ಮದ್ ಮುಸ್ತಫಾ, ಸಲ್ವಾನ್‌, ಮಂಗಳೂರು ನಗರಾಧ್ಯಕ್ಷ ಮುಂಝಿರ್ ಅಹ್ಸನ್, ಸಮ್ಮೇಳನ ಸಂಚಾಲಕ ಹುನೈನ್ ಹುಸೇನ್ ಉಪಸ್ಥಿತರಿದ್ದರು.

WhatsApp Image 2024 10 10 at 10.15.01 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X