ಮಂಗಳೂರು | ಎಸ್‌ಐಓದಿಂದ ‘ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್ (ಸ)’ ಅಭಿಯಾನಕ್ಕೆ ಚಾಲನೆ

Date:

Advertisements

ಪ್ರವಾದಿ ಮುಹಮ್ಮದ್ (ಸ) ರ ಜನ್ಮ ತಿಂಗಳ ಪ್ರಯುಕ್ತ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಎಸ್‌ಐಓ) ದಕ್ಷಿಣ ಕನ್ನಡ ಘಟಕದಿಂದ ‘ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್ (ಸ)’ ಅಭಿಯಾನಕ್ಕೆ ಚಾಲನೆ ಮಂಗಳೂರು ನಗರದ ಬಂದರ್‌ನಲ್ಲಿರುವ ಹಿದಾಯತ್ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು.

ಜಮಾಅತೆ ಇಸ್ಲಾಮೀ ಹಿಂದ್, ಮಂಗಳೂರು ಉತ್ತರ ಅಧ್ಯಕ್ಷರಾದ ಸಿಎ ಇಸ್ಹಾಕ್ ಪುತ್ತೂರು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಒಬ್ಬ ಉತ್ತಮ ಶಿಕ್ಷಕನಿಂದ ಒಂದು ಪೀಳಿಗೆ ಆರೋಗ್ಯಕರವಾಗಿ ಬದಲಾವಣೆಯಾಗುತ್ತದೆ. ಒಂದು ಪೀಳಿಗೆ ಬದಲಾವಣೆಯಾದರೆ ಒಂದು ಸಮಾಜ ಹಿತವಾಗುತ್ತದೆ. ಒಂದು ಸಮಾಜ ಹಿತವಾದರೆ ಒಂದು ದೇಶ ಶ್ರೇಷ್ಠವಾಗುತ್ತದೆ. ಪ್ರವಾದಿ ಮುಹಮ್ಮದ್ (ಸ) ಬದುಕಿನ ಎಲ್ಲ ರಂಗಗಳಲ್ಲೂ ಮಾರ್ಗದರ್ಶಕರಾಗಿದ್ದಾರೆ” ಎಂದು ತಿಳಿಸಿದರು.

ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಹುನೈನ್ ಹುಸೇನ್ ಮಾತನಾಡುತ್ತಾ, ” ಪ್ರವಾದಿ ಮುಹಮ್ಮದ್ (ಸ) ಶಿಕ್ಷಣ ಸೇರಿದಂತೆ ಬದುಕಿನ ಎಲ್ಲ ರಂಗಗಳಲ್ಲೂ ಮಾರ್ಗದರ್ಶಕರಾಗಿದ್ದಾರೆ. ಈ ನಿಟ್ಟಿನಲ್ಲಿ ಪೈಗಂಬರ್ ಮುಹಮ್ಮದ್ (ಸ) ಜನ್ಮ ತಿಂಗಳ ಪ್ರಯುಕ್ತ ಮಾದರಿ ಶಿಕ್ಷಕ ಪೈಗಂಬರ್ ಮುಹಮ್ಮದ್(ಸ) ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಸೆ.7: ಜಮಾಅತೆ ಇಸ್ಲಾಮೀ ಹಿಂದ್‌ನಿಂದ ‘ಧಾರ್ಮಿಕ ಸೌಹಾರ್ದ; ಸವಾಲುಗಳು ಮತ್ತು ಅವಕಾಶ’ ವಿಚಾರಗೋಷ್ಠಿ

ಈ ಸಂದರ್ಭದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್(ಎಸ್‌ಐಓ) ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯ ಝಮೀರ್ ಪಕ್ಕಲಡ್ಕ, ಎಸ್‌ಐಓ ಮಂಗಳೂರು ನಗರ ಅಧ್ಯಕ್ಷರಾದ ಮುಬಶ್ಶಿರ್ ಝಹೂರ್, ಎಸ್‌ಐಓ ಜಿಲ್ಲಾ ಮುಖಂಡರಾದ ಹಸನ್ ಮುಜಾಹಿದ್, ಮುಹಮ್ಮದ್ ಇಸ್ಮಾಯೀಲ್ ಅರ್ಫ್, ಶಯಾನ್ ಹನೀಫ್, ಸಿನಾಫ್ ಬೆಂಗ್ರೆ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X