ಮಂಗಳೂರು |‌ ಕದ್ರಿಯ ಯುದ್ಧ ಸ್ಮಾರಕದಲ್ಲಿ ಟಿ-55 ಟ್ಯಾಂಕ್

Date:

Advertisements

ಯುದ್ಧಭೂಮಿಯಲ್ಲಿ ಕಾದಾಡಲು ನೆರವಾಗಿ ಡಿಕಮಿಷನ್ ಆಗಿರುವ ಟಿ-55 ಸರಣಿಯ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದಲ್ಲಿ ಇನ್ನೂ ಮುಂದೆ ಪ್ರಮುಖ ಆಕರ್ಷಣೆ ಕೇಂದ್ರವಾಗಲಿದೆ. ಪುಣೆಯ ಆರ್ಮಿ ಆರ್ಡಿನೆನ್ಸ್ ಡಿಪೋದಿಂದ ತಂದಿರುವ ಯುದ್ಧ ಟ್ಯಾಂಕ್ ಸೋಮವಾರ ಸಂಜೆ ನಗರಕ್ಕೆ ತಲುಪಿದೆ.

ಪುಣೆಯಿಂದ ಹೊರಟ ಟ್ಯಾಂಕ್ ಟ್ರೇಲರ್‌ನಲ್ಲಿ ಟಿ-55 ಟ್ಯಾಂಕನ್ನು ನಗರಕ್ಕೆ ತಂದಿದ್ದು ಸ್ವಾತಂತ್ರೋತ್ಸವ ದಿನದ ಮೊದಲೇ ಇಲ್ಲಿ ಇದನ್ನು ಸ್ಥಾಪಿಸುವ ಉದ್ದೇಶವಾಗಿತ್ತು.

ಇದನ್ನೂ ಓದಿ: ಮಂಗಳೂರು | ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ ಭಟ್

Advertisements

ಸೇನೆಯಲ್ಲಿ ಯುದ್ಧದ ಸಮಯದಲ್ಲಿ ಬಳಸಿದ ಯಾವುದಾದರೂ ಯಂತ್ರೋಪಕರಣವನ್ನು ನಗರದಲ್ಲಿ ಸ್ಥಾಪಿಸಬೇಕು ಎಂಬ ಬಯಕೆ ಹಿಂದಿನಿಂದಲೇ ಇತ್ತು. ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಇದಕ್ಕೆ ಬೆಂಬಲವಾಗಿ ನಿಂತು ಇಲ್ಲಿಗೆ ತರಲು ಪ್ರಯತ್ನಿಸಿದ್ದರು. ನಾಲೈದು ತಿಂಗಳ ಪರಿಶ್ರಮದ ಫಲವಾಗಿ ಟ್ಯಾಂಕರ್ ಕೊನೆಗೂ ನಗರ ತಲುಪಿದೆ. ಹೊಸ ಟ್ಯಾಂಕರ್‌ಗಳು ಬರುವ ಮುನ್ನ ಟಿ-54, ಟಿ-55 ಸರಣಿಯ ಟ್ಯಾಂಕ್‌ಗಳೇ ಭಾರತ ಸೇನಾಪಡೆಯ ಪ್ರಮುಖ ಅಸ್ತ್ರವಾಗಿತ್ತು. ರಾಜಸ್ತಾನದಲ್ಲಿ ಇವುಗಳನ್ನು ಬಳಸಲಾಗುತ್ತಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X